22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

ಬೆಳ್ತoಗಡಿ : ಪೊಲೀಸ್ ಇಲಾಖೆಯ ಕೋರಿಕೆಯಂತೆ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ ವಿಧಾನ ಸಭಾ ಚುನಾವಣೆ 2023 ಗೆ ಸಂಬಂಧಿಸಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಎ. 17 ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯ ವರೆಗೆ ನಾಮಪತ್ರ ಸಲ್ಲಿಕೆಯನ್ನು ಮೆರವಣಿಗೆ ಮೂಲಕ ನಗರದ ವಿವಿಧ ಭಾಗಗಳಿಂದ ಪ್ರಾರಂಭಿಸಿ ಮುಖ್ಯ ರಸ್ತೆಯ ಮೂಲಕವಾಗಿ ಚುನಾವಣಾ ಅಧಿಕಾರಿಗಳ ಕಛೇರಿಯವರೆಗೆ (ತಾಲೂಕು ಆಡಳಿತ ಸೌಧ) ಸಲ್ಲಿಸಲಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಂಭವವಿರುವುದರಿಂದ ಎ. 17 ರಂದು ನಡೆಯುವ ಸೋಮವಾರದ ವಾರದ ಸಂತೆಯ ದಿನ ವರ್ತಕರು, ವ್ಯಾಪಾರಸ್ಥರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸಂತೆಕಟ್ಟೆಯಿಂದ ಬಸ್‌ ನಿಲ್ದಾಣದವರೆಗೆ ವ್ಯಾಪಾರ ಮಾಡುವುದನ್ನು ನಿಷೇಧಿಸಿದೆ.

ರಸ್ತೆಯ ಎರಡು ಬದಿಯ ಸ್ಥಳದಲ್ಲಿ ವ್ಯಾ ಪಾರ ಮಾಡುವ ವ್ಯಾಪಾರಿಗಳಿಗೆ ಸಂತೆ ಮಾರುಕಟ್ಟೆ ಒಳಗಡೆ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸಲಾಗಿದ್ದು ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸಲು ಕೋರಿದೆ.

Related posts

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya
error: Content is protected !!