ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಬೆಳ್ತoಗಡಿ : ಪೊಲೀಸ್ ಇಲಾಖೆಯ ಕೋರಿಕೆಯಂತೆ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ ವಿಧಾನ ಸಭಾ ಚುನಾವಣೆ 2023 ಗೆ ಸಂಬಂಧಿಸಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಎ. 17 ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯ ವರೆಗೆ ನಾಮಪತ್ರ ಸಲ್ಲಿಕೆಯನ್ನು ಮೆರವಣಿಗೆ ಮೂಲಕ ನಗರದ ವಿವಿಧ ಭಾಗಗಳಿಂದ ಪ್ರಾರಂಭಿಸಿ ಮುಖ್ಯ ರಸ್ತೆಯ ಮೂಲಕವಾಗಿ ಚುನಾವಣಾ ಅಧಿಕಾರಿಗಳ ಕಛೇರಿಯವರೆಗೆ (ತಾಲೂಕು ಆಡಳಿತ ಸೌಧ) ಸಲ್ಲಿಸಲಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಂಭವವಿರುವುದರಿಂದ ಎ. 17 ರಂದು ನಡೆಯುವ ಸೋಮವಾರದ ವಾರದ ಸಂತೆಯ ದಿನ ವರ್ತಕರು, ವ್ಯಾಪಾರಸ್ಥರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸಂತೆಕಟ್ಟೆಯಿಂದ ಬಸ್‌ ನಿಲ್ದಾಣದವರೆಗೆ ವ್ಯಾಪಾರ ಮಾಡುವುದನ್ನು ನಿಷೇಧಿಸಿದೆ.

ರಸ್ತೆಯ ಎರಡು ಬದಿಯ ಸ್ಥಳದಲ್ಲಿ ವ್ಯಾ ಪಾರ ಮಾಡುವ ವ್ಯಾಪಾರಿಗಳಿಗೆ ಸಂತೆ ಮಾರುಕಟ್ಟೆ ಒಳಗಡೆ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸಲಾಗಿದ್ದು ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸಲು ಕೋರಿದೆ.

Leave a Comment

error: Content is protected !!