25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

ಬೆಳ್ತoಗಡಿ : ಪೊಲೀಸ್ ಇಲಾಖೆಯ ಕೋರಿಕೆಯಂತೆ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ ವಿಧಾನ ಸಭಾ ಚುನಾವಣೆ 2023 ಗೆ ಸಂಬಂಧಿಸಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಎ. 17 ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯ ವರೆಗೆ ನಾಮಪತ್ರ ಸಲ್ಲಿಕೆಯನ್ನು ಮೆರವಣಿಗೆ ಮೂಲಕ ನಗರದ ವಿವಿಧ ಭಾಗಗಳಿಂದ ಪ್ರಾರಂಭಿಸಿ ಮುಖ್ಯ ರಸ್ತೆಯ ಮೂಲಕವಾಗಿ ಚುನಾವಣಾ ಅಧಿಕಾರಿಗಳ ಕಛೇರಿಯವರೆಗೆ (ತಾಲೂಕು ಆಡಳಿತ ಸೌಧ) ಸಲ್ಲಿಸಲಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಂಭವವಿರುವುದರಿಂದ ಎ. 17 ರಂದು ನಡೆಯುವ ಸೋಮವಾರದ ವಾರದ ಸಂತೆಯ ದಿನ ವರ್ತಕರು, ವ್ಯಾಪಾರಸ್ಥರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸಂತೆಕಟ್ಟೆಯಿಂದ ಬಸ್‌ ನಿಲ್ದಾಣದವರೆಗೆ ವ್ಯಾಪಾರ ಮಾಡುವುದನ್ನು ನಿಷೇಧಿಸಿದೆ.

ರಸ್ತೆಯ ಎರಡು ಬದಿಯ ಸ್ಥಳದಲ್ಲಿ ವ್ಯಾ ಪಾರ ಮಾಡುವ ವ್ಯಾಪಾರಿಗಳಿಗೆ ಸಂತೆ ಮಾರುಕಟ್ಟೆ ಒಳಗಡೆ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸಲಾಗಿದ್ದು ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸಲು ಕೋರಿದೆ.

Related posts

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!