23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

ನಾರಾವಿ : ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಟಿ. ಏನ್ ಕ್ರಿಯೇಷನ್ ರವರ  ವಜ್ರನಾಭ ಜೈನ್ ನಾರಾವಿ ನಿರ್ಮಾಣದ ಸುರೇಂದ್ರ ಜೈನ್ ನಾರಾವಿ ನಿರ್ದೇಶನದ ಕಲ್ಕುಡ ಮಹಿಮೆ ಎಂಬ ತುಳು ಭಕ್ತಿ ಗೀತೆ ಇತ್ತೀಚೆಗೆ ಅರಸಕಟ್ಟೆ ಕೊಲಾನಿ,ಕುತ್ಲೂರು ಶ್ರೀ ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವಸ್ಥಾನದಲ್ಲಿ ಬಿಡುಗಡೆಗೊಂಡಿತ್ತು.

ಶ್ರೀ ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವದ ಮಹಿಮೆಯನ್ನು ಸಾರುವ ದೃಶ್ಯದ ಮೂಲಕ ವಿಭಿನ್ನ ಶೈಲಿಯ ಭಕ್ತಿಗೀತೆಯನ್ನು  ವಜ್ರನಾಭ ಜೈನ್ ನಾರಾವಿ ಲೋಕಾರ್ಪಣೆಗೊಳಿಸಿದರು. ಈ ಭಕ್ತಿ ಗೀತೆಯ ಸಾಹಿತ್ಯ ಶ್ರೀ ಪಾರ್ಶ್ವನಾಥ  ಜೈನ್ ಕಕ್ಯಪದವು ಗಾಯನ ಮತ್ತು ವಿಡಿಯೋ ಚಿತ್ರೀಕರಣ ಗಣೇಶ್ ಹೆಗ್ಡೆ ಧನ್ವಿತಾ ಸ್ಟುಡಿಯೋ ನಾರಾವಿ ಪರಿಕಲ್ಪನೆ ಹರಿಶ್ಚಂದ್ರ ಪೂಜಾರಿ ನಾರಾವಿ ಸಂಕಲನ ರಕ್ಷಿತ್ ರೈ ತಾಂತ್ರಿಕ ಸಲಹೆ ಯಶವಂತ್ ಬೆಳ್ತಂಗಡಿ ಸಹಕರಿಸಿದ್ದಾರೆ. ಕ್ಷೇತ್ರದ ಅರ್ಚಕರಾದ ರಮೇಶ್ ಭಟ್ ಕೊಕ್ರಾಡಿ ಶುಭ ಹಾರೈಸಿದರು. ತಂಡದ ಸದಸ್ಯರಾದ ಸೂರಜ್ ಜೈನ್, ಶೀನ ಪೂಜಾರಿ, ಯೋಗೀಶ್ ಶೆಟ್ಟಿ ಹಾಗೂ ಭಕ್ತ ವೃಂದ ಉಪಸ್ಥಿತರಿದ್ದರು.

Related posts

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya
error: Content is protected !!