25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ


— ಧರ್ಮಸ್ಥಳ -ಮಂಗಳೂರು ವಾಹನಗಳು ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್, ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಸೂಚನೆ.
—- ಮಂಗಳೂರು-ಧರ್ಮಸ್ಥಳ ವಾಹನಗಳು ಗುರುವಾಯನಕೆರೆಯಿಂದ ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್, ಆದ್ರುಪೆರಾಲ್ ಮುಖಾಂತರ ಸಂಚರಿಸಲು ಸೂಚನೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಎ.೧೭ರಂದು ಬಿಜೆಪಿ, ಕಾಂಗ್ರೆಸ್ ಹಾಗೂ ಎಸ್.ಡಿ.ಪಿ.ಐ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರಕ್ಕೆ ಆಡಚಣೆಯಾಗುವ ಹಿನ್ನಲೆಯಲ್ಲಿ ಬೆಳ್ತಂಗಡಿ ನಗರದಲ್ಲಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆಯನ್ನು ಸೂಚಿಸಿ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಅದೇಶ ನೀಡಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ, ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕಾರ್ಯಕರ್ತರ ಜೊತೆ ಒಂದೇ ದಿನ ನಾಮಪತ್ರ ಸಲ್ಲಿಸಲಿರುವುದರಿಂದ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದ್ದು, ಬದಲಿ ವ್ಯವಸ್ಥೆ ಮಾಡುವಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರು ತಾಲೂಕು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಮನವಿಯನ್ನು ಬೆಳ್ತಂಗಡಿ ತಹಶೀಲ್ದಾರ್ ದ.ಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದು, ತಹಶೀಲ್ದಾರ್ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ದ.ಕ ಜಿಲ್ಲಾಧಿಕಾರಿಗಳು ಈ ಆದೇಶ ಮಾಡಿದ್ದಾರೆ. ಎ.17ರಂದು ಬೆಳ್ತಂಗಡಿ ಪೇಟೆಯನ್ನು ಹಾದು ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಸೂಚಿಸಲಾಗಿದೆ. ಹಾಗೆಯೇ iಡಲು ದ.ಕ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!