September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ , ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಹಾಗೂ ಪಟ್ಟೂರು ಶ್ರೀ ರಾಮ ವಿದ್ಯಾಸಂಸ್ಥೆ ಇವುಗಳ ಸಹಯೋಗದಲ್ಲಿ 12ರಿಂದ 16ರ ವಯೋಮಾನದ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರವು ಎ.12ರಂದು ಪ್ರಾರಂಭಗೊಂಡು ಎ.16ರಂದು ಸಮಾರೋಪಗೊಂಡಿತು.

ಸಮಾರೋಪದ ಅಧ್ಯಕ್ಷತೆಯನ್ನು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆರ್.ಎಸ್.ಎಸ್ ಮುಖಂಡ ಕೃಷ್ಣ ಭಟ್, ಪ್ರಧಾನ ಬೌದ್ಧಿಕರಾಗಿ ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರಜ್ವಲ್ ಆಗಮಿಸಿದ್ದರು. ಭಾರತ್ ಮಾತ ಪೂಜನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲಾ ಶಿಬಿರಾರ್ಥಿಗಳ ಪೋಷಕರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಮೊದಲು ಶಿಬಿರಾರ್ಥಿಗಳಿಂದ ಯೋಗಾಸನ, ಇತರ ಪ್ರದರ್ಶನಗಳು ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದವರನ್ನು ಸಮಿತಿ ವತಿಯಿಂದ ಗೌರವಿಸಲಾಯಿತು.
ಶ್ರೀ ರಾಮ ವಿದ್ಯಾಸಂಸ್ಥೆಯ ಸದಸ್ಯ ಗಣೇಶ್ ಕೆ. ಹಿತ್ತಿಲು ಸ್ವಾಗತಿಸಿದರು. ಸುದರ್ಶನ ಹಿತ್ತಿಲು ವಂದಿಸಿದರು. ಕೇಶವ ಕೊಲ್ಲಾಜೆಪಲ್ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya
error: Content is protected !!