July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಎ.17 ರಂದು ಗುರುವಾಯನಕೆರೆಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾ ಭವನದಲ್ಲಿ ಜರುಗಿತು.
ಸಭಾ ಕಾರ್ಯಕ್ರಮದಲ್ಲಿ ಕೆ. ಪಿ. ಸಿ. ಸಿ ಮಾಧ್ಯಮ ವಕ್ತಾರರಾದ ನಿಕೇತ್ ರಾಜ್ ಮೌರ್ಯ ರವರು ಪ್ರಧಾನ ಭಾಷಣ ಮಾಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಎಂ.ಎಲ್.ಸಿ ಹರೀಶ್ ಕುಮಾರ್ , ಅಭ್ಯರ್ಥಿ ರಕ್ಷಿತ್ ಶಿವರಾಂ, ಚಲನಚಿತ್ರ ನಟ ವಿಜಯ ರಾಘವೇಂದ್ರ, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಕೆ. ಪಿ. ಸಿ. ಸಿ ಸಂಯೋಜಕರಾದ ಶಾಹಿದ್ ತೆಕ್ಕಿಲ್ , ಪ್ರಮುಖರಾದ ಪ್ರತಿಭಾ ಕುಳಾಯಿ, ರಾಜಶೇಖರ ಅಜ್ರಿ, ಕೇಶವ ಗೌಡ ಬೆಳಾಲು, ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಮೋಹನ್ ಗೌಡ, ಸತೀಶ್

ಕಾಶಿಪಟ್ಣ, ಭಗೀರಥ ಜಿ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಹಾಗೂ ರಂಜನ್ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಎ.ಸಿ ಮ್ಯಾಥ್ಯೂ, ಲೋಕೇಶ್ವರಿ ವಿನಯಚಂದ್ರ,

ಜೆಸಿಂತಾ ಮೋನಿಸ್, ಬಿ.ಎಂ ಹಮೀದ್, ಪ್ರಶಾಂತ್ ವೇಗಸ್, ಪ್ರವೀಣ್ ವಿ.ಜಿ, ದಿನೇಶ್ ಕೋಟ್ಯಾನ್, ಬಾಲಕೃಷ್ಣ ಗೌಡ, ಮತ್ತು ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ವಿವಿಧ ಪಕ್ಷಗಳ ನೂರಾರು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.


ಬಹಿರಂಗ ಚುನಾವಣಾ ಪ್ರಚಾರ ಸಭಾ ಕಾರ್ಯಕ್ರಮ ಮುಗಿದ ನಂತರ ಮೆರವಣಿಗೆಯಲ್ಲಿ ತೆರಳಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಸಲಿದ್ದಾರೆ.
.

Related posts

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya
error: Content is protected !!