ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು: ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇದರ ವಾರ್ಷಿಕ ಮಹಾಸಭೆ ಹಾಗೂ 2023-2024 ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ಗೌರವಾಧ್ಯಕ್ಷ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾದ ನಿತೇಶ್ ಕಡಿತ್ಯಾರು ಅಧ್ಯಕ್ಷತೆಯಲ್ಲಿ, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಕಲ್ಲಾಜೆ ಶಾಲಾ ವಠಾರದಲ್ಲಿ ನಡೆಯಿತು.

ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ನೂತನ ಅಧ್ಯಕ್ಷರಾಗಿ ಅಶ್ವಥ್ ರಾಜ್ ಕಲ್ಲಾಜೆ, ಉಪಾಧ್ಯಕ್ಷರಾಗಿ ಪ್ರಶಾಂತ್ ಉಂಬೆಜೆ, ಕಾರ್ಯದರ್ಶಿಯಾಗಿ ಸುಕೇಶ್ ನಡುಮನೆ, ಕೋಶಾಧಿಕಾರಿಯಾಗಿ ಯತೀಶ್ ನೆರೊಲ್ದಪಲ್ಕೆ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಅರ್ಬಿ, ಧಾರ್ಮಿಕ ವಿಭಾಗದ ನಿರ್ದೇಶಕರಾಗಿ
ಅವಿನಾಶ್ ಸೋಮಯ್ಯದಡ್ಡು, ಕ್ರೀಡಾ ವಿಭಾಗದ ನಿರ್ದೇಶಕರಾಗಿ ಸುದರ್ಶನ್ ಮುಂಡಯ್ಯದಡ್ಡು, ಸಾಂಸ್ಕೃತಿಕ ವಿಭಾಗದ ನಿರ್ದೇಶಕರಾಗಿ ರಂಜಿತ್ ಎಟ್ಟಿಬೆಟ್ಟು, ಆರೋಗ್ಯ ವಿಭಾಗದ ನಿರ್ದೇಶಕರಾಗಿ ತುಷಾರ್ ಇಂದಬೆಟ್ಟು, ಮಾಧ್ಯಮ ಮತ್ತು ಪ್ರಚಾರ ವಿಭಾಗದ ನಿರ್ದೇಶಕರಾಗಿ ನಿತೇಶ್ ಕಡಿತ್ಯಾರು ಆಯ್ಕೆ ಮಾಡಲಾಯಿತು.

ಮಹಾ ಸಭೆಯ ವರದಿಯನ್ನು ಕಾರ್ಯದರ್ಶಿ ಅಕ್ಷೀತ್ ಕಲ್ಲಾಜೆ ಮಂಡಿಸಿದರು.

Leave a Comment

error: Content is protected !!