30.1 C
ಪುತ್ತೂರು, ಬೆಳ್ತಂಗಡಿ
May 16, 2025
ಚಿತ್ರ ವರದಿವರದಿಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

ಸಮಾಜ ಮುಖಿ ಚಿಂತನೆಗಳೊಂದಿಗೆ ರಾಷ್ಟ್ರ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಯದುಪತಿ ಗೌಡ ಹೇಳಿದರು.
ಅವರು ವಾಣಿ ಶಿಕ್ಷಣ ಸಂಸ್ಥೆಗಳ ಭಾರತ್ ಸ್ಕೌಟ್ ಮತ್ತು ಗೈಡ್ಸ್‌ಗಳ ಆಶ್ರಯದಲ್ಲಿ ಜರಗುವ ಮೂರು ದಿನಗಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತಾನಾಡುತ್ತ, ವಿದ್ಯಾರ್ಥಿಗಳಲ್ಲಿರುವ ಸೃಜನಾತ್ಮಕ ಚಟುವಟಿಕೆಗಳು ಹಾಗೂ ಪ್ರತಿಭಾನ್ವೇಷನೆಗೆ ಪೂರಕವಾಗಿ ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದು ಅಗತ್ಯವಿದೆ. ಇದರಿಂದ ಜೀವನದಲ್ಲಿ ಹೊಸತನವನ್ನು ಕಂಡುಕೊಳ್ಳಲು ಕ್ರೀಯಶೀಲರಾಗಲು ಸಾಧ್ಯವಿದೆ ಎಂದರು.
ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಲಕ್ಷೀನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಸ್ಥಳಿಯ ಭಾರತ್ ಸ್ಕೌಟ್ ಮತ್ತು ಗೈಡ್ಸ್‌ನ ಕಾರ್ಯದರ್ಶಿಗಳಾದ ಶ್ರೀಮತಿ ಪ್ರಮೀಳಾ ಧ್ವಜಾರೋಹಣವನ್ನು ನೆರವೇರಿಸಿದರು.

ವಾಣಿ ಕಾಲೇಜಿನ ರೇಂಜರ್‍ಸ್ ಲೀಡರ್ ಶ್ರೀಮತಿ ರಕ್ಷಾ, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ನ ಲೀಡರ್ ಗಳಾದ ಶ್ರೀಮತಿ ಶೋಭಾ ನವೀನ್ ಉಪಸ್ಥಿತರಿದ್ದರು.
ವಾಣಿ ಕಾಲೇಜಿನ ರೋವರ್‍ಸ್ ಲೀಡರ್ ಬೆಳಿಯಪ್ಪ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧಮ್ಯ ಶಾಲೆಯ ಸ್ಕೌಟ್ ಮತ್ತು ಗೈಡ್ಸ್‌ನ ಲೀಡರ್ ಶ್ರೀಮತಿ ಸುಮಲತಾ ಧನ್ಯವಾದ ನೀಡಿದರು. ಕು| ಅರ್ಪಿತಾ ಶೆಟ್ಟಿ ಮತ್ತು ಅಶ್ವಿತಾ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!