37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ , ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಹಾಗೂ ಪಟ್ಟೂರು ಶ್ರೀ ರಾಮ ವಿದ್ಯಾಸಂಸ್ಥೆ ಇವುಗಳ ಸಹಯೋಗದಲ್ಲಿ 12ರಿಂದ 16ರ ವಯೋಮಾನದ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರವು ಎ.12ರಂದು ಪ್ರಾರಂಭಗೊಂಡು ಎ.16ರಂದು ಸಮಾರೋಪಗೊಂಡಿತು.

ಸಮಾರೋಪದ ಅಧ್ಯಕ್ಷತೆಯನ್ನು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆರ್.ಎಸ್.ಎಸ್ ಮುಖಂಡ ಕೃಷ್ಣ ಭಟ್, ಪ್ರಧಾನ ಬೌದ್ಧಿಕರಾಗಿ ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರಜ್ವಲ್ ಆಗಮಿಸಿದ್ದರು. ಭಾರತ್ ಮಾತ ಪೂಜನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲಾ ಶಿಬಿರಾರ್ಥಿಗಳ ಪೋಷಕರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಮೊದಲು ಶಿಬಿರಾರ್ಥಿಗಳಿಂದ ಯೋಗಾಸನ, ಇತರ ಪ್ರದರ್ಶನಗಳು ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದವರನ್ನು ಸಮಿತಿ ವತಿಯಿಂದ ಗೌರವಿಸಲಾಯಿತು.
ಶ್ರೀ ರಾಮ ವಿದ್ಯಾಸಂಸ್ಥೆಯ ಸದಸ್ಯ ಗಣೇಶ್ ಕೆ. ಹಿತ್ತಿಲು ಸ್ವಾಗತಿಸಿದರು. ಸುದರ್ಶನ ಹಿತ್ತಿಲು ವಂದಿಸಿದರು. ಕೇಶವ ಕೊಲ್ಲಾಜೆಪಲ್ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!