30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿರಾಜ್ಯ ಸುದ್ದಿ

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

ಮಂಗಳೂರು: ಪ್ರಚಾರ ಸೇರಿದಂತೆ ಇನ್ನಿತರೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992ರ ಡಿ.11ರಂದು ಒಪ್ಪಿಗೆ ನೀಡಿದ್ದು, ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಹಾಗೂ ರಕ್ಷಣೆ ಕಾಯಿದೆ) 2015ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿಸಲಾಗಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಕಾಯಿದೆಯನ್ನು ಉಲ್ಲಂಘಿಸಿ 18 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya
error: Content is protected !!