23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

ಬೆಳ್ತಂಗಡಿ: ನಿಮ್ಮ ಮೊಬೈಲ್ ಕಳವಾದರೆ ಮೊ. ಸಂಖ್ಯೆ 8277949183 ವಾಟ್ಸಪ್ ಸಂಖ್ಯೆಗೆ `ಹಾಯ್’ ಎಂದು ಸಂದೇಶ ಕಳುಹಿಸಿದರೆ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಕಳವಾದ ಮೊಬೈಲ್‌ಗಳ ಪತ್ತೆಗೆ ನೆರವಾಗಲು ಕೇಂದ್ರ ಸರ್ಕಾರ ಪ್ರತ್ಯೇಕ ಪೋರ್ಟಲ್‌ನ್ನು ಇತ್ತೀಚೆಗೆ ಆರಂಭಿಸಿದೆ. ಆದರೆ, ಅದರಲ್ಲಿ ವಿವರಗಳನ್ನು ತುಂಬಲು ಅನೇಕರಿಗೆ ಸಮಸ್ಯೆ ಆಗುತ್ತಿರುವುದರಿಂದ ಪ್ರಕ್ರಿಯೆಯನ್ನು ಸರಳಗೊಳಿಸಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಟ್ಸಫ್ ಮೂಲಕ ದೂರು ನೀಡಬಹುದಾದ ಸೇವೆಯನ್ನು ನೂತನವಾಗಿ ಜಾರಿಗೆ ತರಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಮೊಬೈಲ್ ಕಳವಾಗಿದ್ದರೆ 8277949183 ವಾಟ್ಸಪ್ ಸಂಖ್ಯೆಗೆ ಹಾಯ್ ಎಂದು ಸಂದೇಶ ಕಳುಹಿಸಬೇಕು. ಅವರಿಗೆ ಅರ್ಜಿಯ ಕೊಂಡಿಯನ್ನು ವಾಟ್ಸಪ್‌ನಲ್ಲಿ ಕಳುಹಿಸಲಾಗುವುದು. ಅದರಲ್ಲಿ ಅವರು ಕಳವಾದ ಮೊಬೈಲಿನ ಐಎಂಇಐ ಸಂಖ್ಯೆ ಸೇರಿ ಕೆಲವು ವಿವರಗಳನ್ನು ಭರ್ತಿಮಾಡಿದರೆ ಸಾಕು. ಆ ಮಾಹಿತಿಯನ್ನು ಪೊಲೀಸ್ ಇಲಾಖೆಯ ಸಿಬ್ಬಂದಿಯೇ ಸಿಇಐಆ ಪೋರ್ಟಲ್‌ನಲ್ಲಿ ತುಂಬಿಸಿ, ಮೊಬೈಲ್ ಪತ್ತೆ ಕಾರ್ಯದಲ್ಲಿ ನೆರವಾಗಲಿದ್ದಾರೆ ಎಂದು ಹೇಳಿದರು.
ಈಗಾಗಲೇ 200ಕ್ಕೂ ಅಧಿಕ ಮೊಬೈಲ್ ಪತ್ತೆ: ಮೊಬೈಲ್ ಕಳವಿಗೆ ಸಂಬಂಧಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಇಐಆರ್ ಪೋರ್ಟಲ್‌ನಲ್ಲಿ ಇದುವರೆಗೆ 757 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ 2006 ಹೆಚ್ಚು ಮೊಬೈಲ್ಗಳನ್ನು ಪತ್ತೆಹಚ್ಚಿದ್ದೇವೆ. 120 ಮೊಬೈಲ್‌ಗಳನ್ನು ಮಾಲೀಕರಿಗೆ ಮರಳಿಸಲಾಗಿದೆ ಎಂದರು.
ಇಲಾಖೆ ಸೇವೆ ಗುಣಮಟ್ಟ ಪ್ರತಿಕ್ರಿಯೆಗೆ ಕ್ಯೂಆರ್ ಕೋಡ್: ಪೊಲೀಸ್ ಇಲಾಖೆ ಸೇವೆಯ ಗುಣಮಟ್ಟದ ಕುರಿತು ಸಾರ್ವಜನಿಕರಿಂದ ಪ್ರತಿಕ್ರಿಯೆ ಪಡೆಯುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪ್ರತಿಕ್ರಿಯೆ ಹಂಚಿಕೊಳ್ಳುವ ವಿನೂತನ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಈ ಸೇವೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಚಾಲನೆ ನೀಡಿದ್ದಾರೆ.
ಈ ನೂತನ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಪ್ರತಿ ಠಾಣೆಗಳಲ್ಲೂ ಕ್ಯೂಆರ್ ಕೋಡ್‌ನ್ನು ಇರಿಸಲಾಗುತ್ತದೆ. ಸಾರ್ವಜನಿಕರು ಅದನ್ನು ಸ್ಕ್ಯಾನ್ ಮಾಡಿ, ಅದರಲ್ಲಿ ಆಯಾ ಠಾಣೆಯನ್ನು ಆಯ್ಕೆ ಮಾಡಿ, ಹೆಸರು, ವಿಳಾಸ ಹಾಗೂ ಇತರ ವಿವರಗಳನ್ನು ತುಂಬುವ ಮೂಲಕ ಪ್ರತಿಕ್ರಿಯೆಯನ್ನು ನೀಡಬಹುದು ಎಂದು ವಿವರಿಸಿದರು. ಅಭಿಪ್ರಾಯ ಹಂಚಿಕೊಳ್ಳುವುದರೊಂದಿಗೆ ಅಹವಾಲುಗಳನ್ನೂ ಸಾರ್ವಜನಿಕರು ಸಲ್ಲಿಸಬಹುದು. ಠಾಣೆಯ ಅಧಿಕಾರಿಗಳು ಸರಿಯಾಗಿ ಸ್ಪಂದಿಸದಿದ್ದರೆ ಆ ಬಗ್ಗೆಯೂ ದೂರನ್ನೂ ನೀಡಬಹುದು ಎಂದ ಕುಲದೀಪ್ ಜೈನ್, ಕಳೆದ ಮೂರು ದಿನಗಳಿಂದ ಪ್ರಾಯೋಗಿಕವಾಗಿ ಈ ಸೇವೆಯನ್ನು ಆಯ್ದ ಪೊಲೀಸ್ ಠಾಣೆಗಳಲ್ಲಿ ಜಾರಿಗೆ ತರಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದು ಹೇಳಿದರು.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!