September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

ಬೆಳ್ತಂಗಡಿ: ನಿಮ್ಮ ಮೊಬೈಲ್ ಕಳವಾದರೆ ಮೊ. ಸಂಖ್ಯೆ 8277949183 ವಾಟ್ಸಪ್ ಸಂಖ್ಯೆಗೆ `ಹಾಯ್’ ಎಂದು ಸಂದೇಶ ಕಳುಹಿಸಿದರೆ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಕಳವಾದ ಮೊಬೈಲ್‌ಗಳ ಪತ್ತೆಗೆ ನೆರವಾಗಲು ಕೇಂದ್ರ ಸರ್ಕಾರ ಪ್ರತ್ಯೇಕ ಪೋರ್ಟಲ್‌ನ್ನು ಇತ್ತೀಚೆಗೆ ಆರಂಭಿಸಿದೆ. ಆದರೆ, ಅದರಲ್ಲಿ ವಿವರಗಳನ್ನು ತುಂಬಲು ಅನೇಕರಿಗೆ ಸಮಸ್ಯೆ ಆಗುತ್ತಿರುವುದರಿಂದ ಪ್ರಕ್ರಿಯೆಯನ್ನು ಸರಳಗೊಳಿಸಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಟ್ಸಫ್ ಮೂಲಕ ದೂರು ನೀಡಬಹುದಾದ ಸೇವೆಯನ್ನು ನೂತನವಾಗಿ ಜಾರಿಗೆ ತರಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಮೊಬೈಲ್ ಕಳವಾಗಿದ್ದರೆ 8277949183 ವಾಟ್ಸಪ್ ಸಂಖ್ಯೆಗೆ ಹಾಯ್ ಎಂದು ಸಂದೇಶ ಕಳುಹಿಸಬೇಕು. ಅವರಿಗೆ ಅರ್ಜಿಯ ಕೊಂಡಿಯನ್ನು ವಾಟ್ಸಪ್‌ನಲ್ಲಿ ಕಳುಹಿಸಲಾಗುವುದು. ಅದರಲ್ಲಿ ಅವರು ಕಳವಾದ ಮೊಬೈಲಿನ ಐಎಂಇಐ ಸಂಖ್ಯೆ ಸೇರಿ ಕೆಲವು ವಿವರಗಳನ್ನು ಭರ್ತಿಮಾಡಿದರೆ ಸಾಕು. ಆ ಮಾಹಿತಿಯನ್ನು ಪೊಲೀಸ್ ಇಲಾಖೆಯ ಸಿಬ್ಬಂದಿಯೇ ಸಿಇಐಆ ಪೋರ್ಟಲ್‌ನಲ್ಲಿ ತುಂಬಿಸಿ, ಮೊಬೈಲ್ ಪತ್ತೆ ಕಾರ್ಯದಲ್ಲಿ ನೆರವಾಗಲಿದ್ದಾರೆ ಎಂದು ಹೇಳಿದರು.
ಈಗಾಗಲೇ 200ಕ್ಕೂ ಅಧಿಕ ಮೊಬೈಲ್ ಪತ್ತೆ: ಮೊಬೈಲ್ ಕಳವಿಗೆ ಸಂಬಂಧಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಇಐಆರ್ ಪೋರ್ಟಲ್‌ನಲ್ಲಿ ಇದುವರೆಗೆ 757 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ 2006 ಹೆಚ್ಚು ಮೊಬೈಲ್ಗಳನ್ನು ಪತ್ತೆಹಚ್ಚಿದ್ದೇವೆ. 120 ಮೊಬೈಲ್‌ಗಳನ್ನು ಮಾಲೀಕರಿಗೆ ಮರಳಿಸಲಾಗಿದೆ ಎಂದರು.
ಇಲಾಖೆ ಸೇವೆ ಗುಣಮಟ್ಟ ಪ್ರತಿಕ್ರಿಯೆಗೆ ಕ್ಯೂಆರ್ ಕೋಡ್: ಪೊಲೀಸ್ ಇಲಾಖೆ ಸೇವೆಯ ಗುಣಮಟ್ಟದ ಕುರಿತು ಸಾರ್ವಜನಿಕರಿಂದ ಪ್ರತಿಕ್ರಿಯೆ ಪಡೆಯುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪ್ರತಿಕ್ರಿಯೆ ಹಂಚಿಕೊಳ್ಳುವ ವಿನೂತನ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಈ ಸೇವೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಚಾಲನೆ ನೀಡಿದ್ದಾರೆ.
ಈ ನೂತನ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಪ್ರತಿ ಠಾಣೆಗಳಲ್ಲೂ ಕ್ಯೂಆರ್ ಕೋಡ್‌ನ್ನು ಇರಿಸಲಾಗುತ್ತದೆ. ಸಾರ್ವಜನಿಕರು ಅದನ್ನು ಸ್ಕ್ಯಾನ್ ಮಾಡಿ, ಅದರಲ್ಲಿ ಆಯಾ ಠಾಣೆಯನ್ನು ಆಯ್ಕೆ ಮಾಡಿ, ಹೆಸರು, ವಿಳಾಸ ಹಾಗೂ ಇತರ ವಿವರಗಳನ್ನು ತುಂಬುವ ಮೂಲಕ ಪ್ರತಿಕ್ರಿಯೆಯನ್ನು ನೀಡಬಹುದು ಎಂದು ವಿವರಿಸಿದರು. ಅಭಿಪ್ರಾಯ ಹಂಚಿಕೊಳ್ಳುವುದರೊಂದಿಗೆ ಅಹವಾಲುಗಳನ್ನೂ ಸಾರ್ವಜನಿಕರು ಸಲ್ಲಿಸಬಹುದು. ಠಾಣೆಯ ಅಧಿಕಾರಿಗಳು ಸರಿಯಾಗಿ ಸ್ಪಂದಿಸದಿದ್ದರೆ ಆ ಬಗ್ಗೆಯೂ ದೂರನ್ನೂ ನೀಡಬಹುದು ಎಂದ ಕುಲದೀಪ್ ಜೈನ್, ಕಳೆದ ಮೂರು ದಿನಗಳಿಂದ ಪ್ರಾಯೋಗಿಕವಾಗಿ ಈ ಸೇವೆಯನ್ನು ಆಯ್ದ ಪೊಲೀಸ್ ಠಾಣೆಗಳಲ್ಲಿ ಜಾರಿಗೆ ತರಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದು ಹೇಳಿದರು.

Related posts

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya
error: Content is protected !!