32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲಿನ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳ ಕೈವಾಡವಿದೆಯೇ ಎಂದು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಾದ ಟಿ. ಸುರೇಶ್ ಕುಮಾರ್ ರವರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ವಕೀಲರುಗಳಾದ ಶ್ರೀ ಉದಯಕುಮಾರ್ ಬಿ.ಕೆ, ಶ್ರೀ ಪ್ರಕಾಶ್ ಬೆಳ್ತಂಗಡಿ, ಶ್ರೀ ಆನಂದ ಗೌಡ ತೆರಿಗೆ ಸಲಹೆಗಾರರು ಬೆಳ್ತಂಗಡಿ,ಶ್ರೀ ಕೇಶವ ಅಚ್ಚಿ ನಡ್ಕ, ಶ್ರೀ ಮುರಳಿದರ ಸಾರ್ವಜನಿಕ ಶಾರದೋತ್ಸವ ಸಮಿತಿಯ ಅಧ್ಯಕ್ಷರು ಬೆಳ್ತಂಗಡಿ, ಶ್ರೀ ಶ್ರೀಶ ಭಟ್ ನಂದ ಗೋಕುಲ ಗೋಶಾಲ ಪ್ರಬಂಧಕರು ಕಳೆಂಜ, ಸೌ. ಕಮಲಾ ಪೈ ಉಜಿರೆ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
error: Content is protected !!