April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲಿನ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳ ಕೈವಾಡವಿದೆಯೇ ಎಂದು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಾದ ಟಿ. ಸುರೇಶ್ ಕುಮಾರ್ ರವರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ವಕೀಲರುಗಳಾದ ಶ್ರೀ ಉದಯಕುಮಾರ್ ಬಿ.ಕೆ, ಶ್ರೀ ಪ್ರಕಾಶ್ ಬೆಳ್ತಂಗಡಿ, ಶ್ರೀ ಆನಂದ ಗೌಡ ತೆರಿಗೆ ಸಲಹೆಗಾರರು ಬೆಳ್ತಂಗಡಿ,ಶ್ರೀ ಕೇಶವ ಅಚ್ಚಿ ನಡ್ಕ, ಶ್ರೀ ಮುರಳಿದರ ಸಾರ್ವಜನಿಕ ಶಾರದೋತ್ಸವ ಸಮಿತಿಯ ಅಧ್ಯಕ್ಷರು ಬೆಳ್ತಂಗಡಿ, ಶ್ರೀ ಶ್ರೀಶ ಭಟ್ ನಂದ ಗೋಕುಲ ಗೋಶಾಲ ಪ್ರಬಂಧಕರು ಕಳೆಂಜ, ಸೌ. ಕಮಲಾ ಪೈ ಉಜಿರೆ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya
error: Content is protected !!