ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ: ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲಿನ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳ ಕೈವಾಡವಿದೆಯೇ ಎಂದು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಾದ ಟಿ. ಸುರೇಶ್ ಕುಮಾರ್ ರವರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ವಕೀಲರುಗಳಾದ ಶ್ರೀ ಉದಯಕುಮಾರ್ ಬಿ.ಕೆ, ಶ್ರೀ ಪ್ರಕಾಶ್ ಬೆಳ್ತಂಗಡಿ, ಶ್ರೀ ಆನಂದ ಗೌಡ ತೆರಿಗೆ ಸಲಹೆಗಾರರು ಬೆಳ್ತಂಗಡಿ,ಶ್ರೀ ಕೇಶವ ಅಚ್ಚಿ ನಡ್ಕ, ಶ್ರೀ ಮುರಳಿದರ ಸಾರ್ವಜನಿಕ ಶಾರದೋತ್ಸವ ಸಮಿತಿಯ ಅಧ್ಯಕ್ಷರು ಬೆಳ್ತಂಗಡಿ, ಶ್ರೀ ಶ್ರೀಶ ಭಟ್ ನಂದ ಗೋಕುಲ ಗೋಶಾಲ ಪ್ರಬಂಧಕರು ಕಳೆಂಜ, ಸೌ. ಕಮಲಾ ಪೈ ಉಜಿರೆ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!