25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

ಮರೋಡಿ ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ವತಿಯಿಂದ ಸುಬ್ರಹ್ಮಣ್ಯ ಪ್ರಸಾದ್‌ ನೇತೃತ್ವದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆಯು ಏ.22ರಂದು ಶನಿವಾರ ಸಂಜೆ 4ರಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಜರುಗಲಿದೆ.

ಈ ಪ್ರಯುಕ್ತ ರಾತ್ರಿ 7.30ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮಂಗಳೂರಿನ ಕುದ್ರೋಳಿ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಧಾರ್ಮಿಕ ಉಪನ್ಯಾಸ ನೀಡುವರು. ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಗೌರವಾಧ್ಯಕ್ಷ ಯಶೋಧರ ಬಂಗೇರ ಅಧ್ಯಕ್ಷತೆ ವಹಿಸುವರು. ಕಂಬಳ ಕ್ಷೇತ್ರದ ಸಾಧಕ, ಉದ್ಯಮಿ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಶಿರ್ತಾಡಿ ಪ್ರಭಾ ಕ್ಲಿನಿಕ್‌ನ ಡಾ.ಆಶೀರ್ವಾದ್‌, ಪ್ರಗತಿಪರ ಕೃಷಿಕ ರವೀಂದ್ರ ಹೆಗ್ಡೆ ಉಚ್ಚೂರು, ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಅಧ್ಯಕ್ಷ ರಾಘವ ಪೂಜಾರಿ, ಯುವ ಉದ್ಯಮಿ ದಿನೇಶ್‌ ಬುಣ್ಣಾನ್ ಇಸ್ರೇಲ್‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಂಜೆ 4ಗಂಟೆಗೆ ಕಲಶ ಪ್ರತಿಷ್ಠೆ, ಶ್ರೀ ಶನೈಶ್ವರ ಪೂಜೆ ಆರಂಭ, 6.30ಕ್ಕೆ ಶ್ರೀ ಉಮಾಮಹೇಶ್ವರ ದೇವರಿಗೆ ರಂಗಪೂಜೆ, ರಾತ್ರಿ 7.30ಕ್ಕೆ ಧಾರ್ಮಿಕ ಸಭೆ, 8 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ, ಪ್ರಸಾದ ವಿತರಣೆ, 8.30ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ಗಂಟೆಗೆ ಉಮೇಶ್‌ ಮಿಜಾರ್‌ ಸಾರಥ್ಯದ ನಮ್ಮ ಕಲಾವಿದೆರ್‌ ಬೆದ್ರ ಇವರಿಂದ ‘ಕುಸಲ್ದ ಗೊಬ್ಬು’ ತುಳು ಹಾಸ್ಯಮಯ ನಾಟಕ (ಅಪ್ಪೆ ಮಂತ್ರದೇವತೆನ ಮೈಮೆನ್‌ ಸಾರುನ ನಾಟಕ) ನಡೆಯಲಿದೆ.

Related posts

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಕೊಕ್ಕಡ ಬಡೆಕ್ಕರ ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯರಿಗೆ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಮಹಾ ಪ್ರಧಾನ ಅರ್ಚಕ ಗೌರವ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!