25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ತೋಟಗಾರಿಕಾ ಮಹಾವಿದ್ಯಾಲಯ ಮೂಡಿಗೆರೆ ಇಲ್ಲಿಯ ಅಂತಿಮ ಸೆಮಿಸ್ಟರ್‌ನ ತೋಟಗಾರಿಕಾ ವಿಭಾಗದ ವಿದ್ಯಾರ್ಥಿನಿ ಅಂಚಿತಾ ಡಿ ಜೈನ್ ಇವರು 2022-23 ರ ಸಾಲಿನಲ್ಲಿ ರಾಷ್ಟ್ರೀಯ  ಕೃಷಿ ಉನ್ನತ ಶಿಕ್ಷಣ ಯೋಜನೆಯ ಅಂತರ್‌ರಾಷ್ಟ್ರೀಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ನಡೆದಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳೊಂದಿಗೆ ಆಯ್ಕೆಯಾಗಿ ಸಂಸ್ಥೆ ಹಾಗೂ ರಾಜ್ಯ ಮತ್ತು ದೇಶಕ್ಕೆ ಹೆಸರು ತಂದಿರುತ್ತಾರೆ. ಮೂರು ತಿಂಗಳು ಕಾಲ ಜರ್ಮನಿಯ ಟ್ಯೂಬಿಂಗನ್ನಲ್ಲಿರುವ ಎಬರ್ಹಾರ್ಡ ಕಾರ್ಲ್ಸ ಮಹಾವಿಶ್ವವಿದ್ಯಾಲಯದಲ್ಲಿ ಉಚಿತ ತರಬೇತಿ ಹಾಗೂ ಇಂಟರ್ನ್ಶಿಪ್‌ಗಾಗಿ ತೆರಳಿದ್ದು ಸರಕಾರವೇ ಇದರ ಸಂಪೂರ್ಣ ವೆಚ್ಚವನ್ನು ಭರಿಸಿರುತ್ತದೆ. 
ಇವರು ರಾಷ್ಟ್ರೀಯ ಸೇವಾ ಯೋಜನೆ ಘಟಕ ಮೂಡಿಗೆರೆಯ ಪ್ರತಿನಿಧಿಯಾಗಿ ಕಾಲೇಜು ಹಂತದಲ್ಲಿ ಆಯ್ಕೆಗೊಂಡ ಬಳಿಕ ಶಿವಮೊಗ್ಗ ಕೃಷಿ & ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ನಡೆದ ಆಯ್ಕೆ ಸುತ್ತಿನಲ್ಲಿ ಮುಂದಿನ ಹಂತಕ್ಕೆ ತೇರ್ಗಡೆಗೊಂಡು, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಶಿಬಿರದಲ್ಲಿ ಭಾಗವಹಿಸಿ 32 ವಿದ್ಯಾರ್ಥಿಗಳಲ್ಲಿ ಓರ್ವಳಾಗಿ ಆಯ್ಕೆಗೊಂಡು, ಮುಂದಕ್ಕೆ ತಮಿಳುನಾಡಿನ ತಿರುಚಿರಾಪಳ್ಳಿಯ ನ್ಯಾಷನಲ್ ಕಾಲೇಜಿನಲ್ಲಿ ನಡೆದ 10 ದಿನಗಳ ದಕ್ಷಿಣ ವಲಯ ಪೂರ್ವ ಗಣರಾಜ್ಯೋತ್ಸವದ ಶಿಬಿರದಲ್ಲಿ ಭಾಗವಹಿಸಿದ್ದು,  ಇದರಲ್ಲಿ ಒಟ್ಟು 7 ವಿದ್ಯಾರ್ಥಿಗಳ ಆಯ್ಕೆಯಾದವರಲ್ಲಿ ಈಕೆ ರಾಜ್ಯದಲ್ಲಿ ಮೊದಲ ಸ್ಥಾನಿಯಾಗಿ ಆಯ್ಕೆಗೊಂಡು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡಿನಲ್ಲಿ ಭಾಗವಹಿಸಿ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿ ಪ್ರಧಾನಿಮಂತ್ರಿಯವರಿಂದ ಪ್ರಶಂಶಾಪತ್ರ ಪಡೆದಿರುವ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುತ್ತಾರೆ.
ಇವರ ರಾಷ್ಟ್ರಮಟ್ಟದವರೆಗಿನ ಸಾಧನೆಗೆ ಸಲಹೆ ಸೂಚನೆ ಮಾರ್ಗದರ್ಶನವನ್ನು ಸಂಸ್ಥೆಯ ಡೀನ್ ಆಗಿರುವ ಡಾ. ನಾರಾಯಣ ಎಸ್. ಮಾರ್ವರ್ಕರ್ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಸಂಯೋಜನಾಧಿಕಾರಿಯಾದ ಯೆಲ್ಲೇಶ್ ಕುಮಾರ್ ಹೆಚ್.ಎಸ್‌ರವರು ತರಬೇತಿಯನ್ನು ನೀಡಿ, ಸಂಸ್ಥೆಯ ಉಪನ್ಯಾಸಕ ಬಳಗ ಪ್ರೋತ್ಸಾಹವನ್ನು ನೀಡಿರುತ್ತಾರೆ. 
ಇವರು ಕರ್ನಾಟಕ ಪಬ್ಲಿಕ್‌ಸ್ಕೂಲ್ ಪುಂಜಾಲಕಟ್ಟೆಯ ಸೆಕೆಂಡರಿ ವಿಭಾಗದ ಸಹಶಿಕ್ಷಕ ಧರಣೇಂದ್ರ ಕೆ ಹಾಗೂ ಅನುಪಮ ದಂಪತಿಗಳ ಪುತ್ರಿಯಾಗಿರುತ್ತಾರೆ.

Related posts

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya
error: Content is protected !!