33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

ಮಚ್ಚಿನ: ಶ್ರೀ ಸತ್ಯಚಾವಡಿ ಮನೆ ಮಾನ್ಯ ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಶ್ರೀ ಧೂಮವತಿ, ಬಂಟ ಪರಿವಾರ ದೈವಗಳು ಮತ್ತು ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಎ.30 ರಿಂದ ಮೇ.3 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಎ.20 ರಂದು ನಡೆಯಿತು.

ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿಯ ಬಗ್ಗೆ ಎಲ್ಲರ ಸಹಕಾರ ಕೋರಲಾಯಿತು.

ತರವಾಡು ಮನೆಯ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು ಈಗಾಗಲೇ ಹೆಚ್ಚಿನ ಕೆಲಸ ಪೂರ್ಣಗೊಂಡಿದೆ.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಚಿಪ್ಲುಕೋಟೆ, ಆಡಳಿತ ಸಮಿತಿ ಅಧ್ಯಕ್ಷ ಜನಾರ್ದನ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೋಜರಾಜ ಬಂಗೇರ ಮಾನ್ಯ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಯೋಗೀಶ್ ಕಡ್ತಿಲ, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯಚಂದ್ರ ಜೆಂಕ್ಯಾರು, ಜೀರ್ಣೋದ್ಧಾರದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಮಾನ್ಯ ತರವಾಡು ಮನೆಯ ಹಿರಿಯರಾದ ಸಂಜೀವ ಪೂಜಾರಿ, ಆಡಳಿತ ಮಂಡಳಿಯ ಗೌರವಾಧ್ಯಕ್ಷ ದಿನಕರ ಪೂಜಾರಿ ಕಡ್ತಿಲ, ಬ್ರಹ್ಮಕಲಶೋತ್ಸವ ಸಮಿತಿ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಶ್ರೀಮತಿ ಪೂರ್ಣಿಮಾ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ಕೋಟ್ಯಾನ್ ಬರಿಯ ಹಿರಿಯರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya
error: Content is protected !!