July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ


ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.30ರಂದು ನಡೆಯಲಿರುವ 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಎ.23ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಜರಗಲಿದೆ.

ಈ ಬಾರಿ ಒಟ್ಟು 11 ಜೋಡಿಗಳಿಗೆ ವಿವಾಹ ನಡೆಯಲಿದ್ದು, ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ. ಈ ಸಂದರ್ಭದಲ್ಲಿ ಭಾವೀ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು. ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಕೊಶಾಧಿಕಾರಿ ವಸಂತ ಸುವರ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮೇಲ್ವಿಚಾರಕಿ ಅಶ್ವಿನಿ ಅವರು ಅಧ್ಯಕ್ಷತೆ ವಹಿಸುವರು. ಉದ್ಯಮಿ ನಾಗೇಶ್ ಪ್ರಭು ಅವರು ಮಂಗಳ ವಸ್ತ್ರ ವಿತರಿಸುವರು. ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಹಾಗೂ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya
error: Content is protected !!