ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಉಜಿರೆ : ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಎ.19 ರಂದು ಇಫ್ತಾರನ್ನು ಆಚರಿಸಲಾಯಿತು.
ರೊ. ಡಾ. ಪ್ರದೀಪ್ ನಾವೂರು ರಂಜಾನ್- ಸೌಹಾರ್ದತೆಯ ಸಂಕೇತ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಎಲ್ಲಾ ಧರ್ಮಗಳಲ್ಲಿರುವ ಭಾವೈಕ್ಯತೆಯ ಮೌಲ್ಯಗಳ ಬಗ್ಗೆ ಅವರು ವಿಶ್ಲೇಷಿಸಿದರು.

ರೋಟರಿ ಕ್ಲಬ್ ಅಧ್ಯಕ್ಷೆ ರೊ. ಮನೋರಮಾ ಭಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಡ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಯಾಕೂಬ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯರಾದ ಷರೀಫ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕ್ಲಬ್ ನ ಕಾರ್ಯದರ್ಶಿ ರೊ. ರಕ್ಷಾ ರಾಗ್ನೀಶ್, ರೋಟರಿ ಜಿಲ್ಲಾ ಸಹಾಯಕ ಗವರ್ನರ್ ರೊ. ನಿವೃತ್ತ ಮೇಜರ್ ಜನರಲ್ ಎಂ ವಿ ಭಟ್, ಕ್ಲಬ್ ನ ಪೂರ್ವಾಧ್ಯಕ್ಷರುಗಳು, ನಿಯೋಜಿತ ಅಧ್ಯಕ್ಷ ರೊ. ಅನಂತ ಭಟ್ ಮಚ್ಚಿಮಲೆ, ಸದಸ್ಯರುಗಳು, ಆ್ಯನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಸುಜಾತಾ ಅಣ್ಣಿ ಪೂಜಾರಿ ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Leave a Comment

error: Content is protected !!