September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

ಕಳೆಂಜ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕು. ಹರ್ಷಿತಾ (ಶೇ.98.16) ರವರಿಗೆ ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಅಭಿನಂದನಾ ಸಮಾರಂಭ ಎ.21 ರಂದು ಕಳೆಂಜ ಗ್ರಾಮದ ನೂಜಿಲ ಮನೆಯಲ್ಲಿ ನಡೆಯಿತು.

ಕಳೆಂಜ ಗ್ರಾಮದ ನೂಜಿಲ ಮನೆ ಸತೀಶ್ ಗೌಡ ಹಾಗೂ ಗೀತಾ ದಂಪತಿ ಪುತ್ರಿ ಕು. ಹರ್ಷಿತಾ ಅವರು ವಾಣಿಜ್ಯ ವಿಭಾಗದಲ್ಲಿ 589 ಅಂಕಗಳನ್ನು ಪಡೆದು ಗ್ರಾಮಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಕೌಕ್ರಾಡಿ ಸಂತ ಜಾನರ ಹಿ. ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ಡಿ ಸೋಜ ಅವರು ವಿದ್ಯಾರ್ಥಿನಿಗೆ ಶಾಲು ಹೊದಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಅತ್ತ್ಯುತ್ತಮ ಶೈಕ್ಷಣಿಕ ಸಾಧನೆಯಿಂದ ಗ್ರಾಮಕ್ಕೆ ಕೀರ್ತಿ ತಂದ ಸಾಧನೆಗಾಗಿ ಶುಭಾಶಯಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಗೀತಾ, ಸತೀಶ್ ಗೌಡ, ಗ್ರಹಿತ್, ಮಾಯಿಲಪ್ಪ ಗೌಡ ಮುಂತಾದವರು ಉಪಸ್ಥಿತರಿದ್ದರು.

ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಅವರು ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೆ. ಶ್ರೀಧರ್ ರಾವ್ ಅವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya
error: Content is protected !!