July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

ಕಳೆಂಜ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕು. ಹರ್ಷಿತಾ (ಶೇ.98.16) ರವರಿಗೆ ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಅಭಿನಂದನಾ ಸಮಾರಂಭ ಎ.21 ರಂದು ಕಳೆಂಜ ಗ್ರಾಮದ ನೂಜಿಲ ಮನೆಯಲ್ಲಿ ನಡೆಯಿತು.

ಕಳೆಂಜ ಗ್ರಾಮದ ನೂಜಿಲ ಮನೆ ಸತೀಶ್ ಗೌಡ ಹಾಗೂ ಗೀತಾ ದಂಪತಿ ಪುತ್ರಿ ಕು. ಹರ್ಷಿತಾ ಅವರು ವಾಣಿಜ್ಯ ವಿಭಾಗದಲ್ಲಿ 589 ಅಂಕಗಳನ್ನು ಪಡೆದು ಗ್ರಾಮಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಕೌಕ್ರಾಡಿ ಸಂತ ಜಾನರ ಹಿ. ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ಡಿ ಸೋಜ ಅವರು ವಿದ್ಯಾರ್ಥಿನಿಗೆ ಶಾಲು ಹೊದಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಅತ್ತ್ಯುತ್ತಮ ಶೈಕ್ಷಣಿಕ ಸಾಧನೆಯಿಂದ ಗ್ರಾಮಕ್ಕೆ ಕೀರ್ತಿ ತಂದ ಸಾಧನೆಗಾಗಿ ಶುಭಾಶಯಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಗೀತಾ, ಸತೀಶ್ ಗೌಡ, ಗ್ರಹಿತ್, ಮಾಯಿಲಪ್ಪ ಗೌಡ ಮುಂತಾದವರು ಉಪಸ್ಥಿತರಿದ್ದರು.

ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಅವರು ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೆ. ಶ್ರೀಧರ್ ರಾವ್ ಅವರು ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಪದ್ಮುಂಜ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya
error: Content is protected !!