24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

ಕಳೆಂಜ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕು. ಹರ್ಷಿತಾ (ಶೇ.98.16) ರವರಿಗೆ ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಅಭಿನಂದನಾ ಸಮಾರಂಭ ಎ.21 ರಂದು ಕಳೆಂಜ ಗ್ರಾಮದ ನೂಜಿಲ ಮನೆಯಲ್ಲಿ ನಡೆಯಿತು.

ಕಳೆಂಜ ಗ್ರಾಮದ ನೂಜಿಲ ಮನೆ ಸತೀಶ್ ಗೌಡ ಹಾಗೂ ಗೀತಾ ದಂಪತಿ ಪುತ್ರಿ ಕು. ಹರ್ಷಿತಾ ಅವರು ವಾಣಿಜ್ಯ ವಿಭಾಗದಲ್ಲಿ 589 ಅಂಕಗಳನ್ನು ಪಡೆದು ಗ್ರಾಮಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಕೌಕ್ರಾಡಿ ಸಂತ ಜಾನರ ಹಿ. ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ಡಿ ಸೋಜ ಅವರು ವಿದ್ಯಾರ್ಥಿನಿಗೆ ಶಾಲು ಹೊದಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಅತ್ತ್ಯುತ್ತಮ ಶೈಕ್ಷಣಿಕ ಸಾಧನೆಯಿಂದ ಗ್ರಾಮಕ್ಕೆ ಕೀರ್ತಿ ತಂದ ಸಾಧನೆಗಾಗಿ ಶುಭಾಶಯಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಗೀತಾ, ಸತೀಶ್ ಗೌಡ, ಗ್ರಹಿತ್, ಮಾಯಿಲಪ್ಪ ಗೌಡ ಮುಂತಾದವರು ಉಪಸ್ಥಿತರಿದ್ದರು.

ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಅವರು ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೆ. ಶ್ರೀಧರ್ ರಾವ್ ಅವರು ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!