38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

ಕಳೆಂಜ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕು. ಹರ್ಷಿತಾ (ಶೇ.98.16) ರವರಿಗೆ ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಅಭಿನಂದನಾ ಸಮಾರಂಭ ಎ.21 ರಂದು ಕಳೆಂಜ ಗ್ರಾಮದ ನೂಜಿಲ ಮನೆಯಲ್ಲಿ ನಡೆಯಿತು.

ಕಳೆಂಜ ಗ್ರಾಮದ ನೂಜಿಲ ಮನೆ ಸತೀಶ್ ಗೌಡ ಹಾಗೂ ಗೀತಾ ದಂಪತಿ ಪುತ್ರಿ ಕು. ಹರ್ಷಿತಾ ಅವರು ವಾಣಿಜ್ಯ ವಿಭಾಗದಲ್ಲಿ 589 ಅಂಕಗಳನ್ನು ಪಡೆದು ಗ್ರಾಮಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಕೌಕ್ರಾಡಿ ಸಂತ ಜಾನರ ಹಿ. ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ಡಿ ಸೋಜ ಅವರು ವಿದ್ಯಾರ್ಥಿನಿಗೆ ಶಾಲು ಹೊದಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಅತ್ತ್ಯುತ್ತಮ ಶೈಕ್ಷಣಿಕ ಸಾಧನೆಯಿಂದ ಗ್ರಾಮಕ್ಕೆ ಕೀರ್ತಿ ತಂದ ಸಾಧನೆಗಾಗಿ ಶುಭಾಶಯಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಗೀತಾ, ಸತೀಶ್ ಗೌಡ, ಗ್ರಹಿತ್, ಮಾಯಿಲಪ್ಪ ಗೌಡ ಮುಂತಾದವರು ಉಪಸ್ಥಿತರಿದ್ದರು.

ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಅವರು ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೆ. ಶ್ರೀಧರ್ ರಾವ್ ಅವರು ಕಾರ್ಯಕ್ರಮ ನಿರೂಪಿಸಿದರು.

Related posts

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya
error: Content is protected !!