ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya


ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರ ಪ್ರವಾಸ ಕಾರ್ಯಕ್ರಮ ನಿಮಿತ್ತ ಶನಿವಾರ ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದಾರೆ.

ಶನಿವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 10 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಬಳಿಕ 12 ಗಂಟೆಗೆ ಉಜಿರೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಉಜಿರೆಯಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಲಿದ್ದಾರೆ.

Leave a Comment

error: Content is protected !!