23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

ಬೆಳ್ತಂಗಡಿ: ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ‌ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು, ಸಹೋದರ ಡಿ‌ ಹರ್ಷೇಂದ್ರ ಕುಮಾರ್ ಅವರನ್ನು, ಶ್ರೀರಾಮ ಕ್ಷೇತ್ರದ ಪೀಠಾಧಿಪತಿಗಳಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು, ಅಸ್ಸಯ್ಯಿದ್ ಕಾಜೂರು ತಂಙಳ್ ಅವರನ್ನು, ಬೇಟಿ ಮಾಡಿದರು.

ಕಾಜೂರು ದರ್ಗಾಶರೀಫ್ ನಲ್ಲಿ ಚಾದರ ಅರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮಸ್ಥಳ ಭೇಟಿಯ ವೇಳೆ ಅಭ್ಯರ್ಥಿ ಕಡೆಯಿಂದ ಪೂಜ್ಯ ಹೆಗ್ಗಡೆಯವರನ್ನು, ಕನ್ಯಾಡಿ ಸ್ವಾಮೀಜಿಯವರನ್ನು ಶಾಲು ಹೊದೆಸಿ ಗೌರವಿಸಲಾಯಿತು. ಶ್ರೀರಾಮ ಕ್ಷೇತ್ರದಲ್ಲಿ ಸ್ವಾಮೀಜಿಯವರು ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರನ್ನು ಸನ್ಮಾನಿಸಿ ಮಾರ್ಗದರ್ಶನ ನೀಡಿದರು.

ಪಕ್ಷದ ಕಾರ್ಯಾಧ್ಯಕ್ಷ ರಾಮ ಆಚಾರಿ, ಸಂ.ಕಾರ್ಯದರ್ಶಿ ಹೆಚ್.ಎನ್ ನಾಗರಾಜ್, ಅಲ್ಪಸಂಖ್ಯಾತ ಘಟಕದ ಪ್ರ. ಕಾರ್ಯದರ್ಶಿ ಶಾಹಿದ್ ಪಾದೆ, ಮಹೇಶ್ ಪಿ.ಜಿ ಉಜಿರೆ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya
error: Content is protected !!