32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಭರದಿಂದ ಆರಂಭಗೊಂಡಿವೆ.
ಏಪ್ರಿಲ್ 21 ರಂದು ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ಹಿನ್ನಲೆಯಲ್ಲಿ ಪ್ರವೇಶಾತಿ ಪ್ರಕ್ರಿಯೆಗಳು ಚುರುಕುಗೊಂಡಿವೆ.
ರಾಷ್ಟ್ರೀಯ ಮೌಲ್ಯಂಕನ ಪರಿಷತ್ತು ನ್ಯಾಕ್ ಸಂಸ್ಥೆಯಿಂದ ಸತತ 4ನೇ ಬಾರಿಗೆ A++ ಮಾನ್ಯತೆಯನ್ನ ಗಳಿಸಿದ ಶ್ರೇಷ್ಠ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಉಜಿರೆ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಸಾಂಸ್ಕೃತಿಕ , ಕ್ರೀಡಾ ಚಟುವಟಿಕೆಗಳು, ತರಬೇತಿ , ಸಂಶೋಧನೆ ಹಾಗೂ ಉದ್ಯೋಗಗಳಿಗೆ ಪೂರಕವಾದ ನಿರಂತರ ತರಬೇತಿಯನ್ನು ನೀಡಲಾಗುತ್ತಿದೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರದಲ್ಲಿಯೇ ವಿಶಿಷ್ಟ ಮಾನ್ಯತೆ ಪಡೆದಿರುವ ಈ ಕಾಲೇಜಿನ ಸೌಲಭ್ಯಗಳನ್ನ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya
error: Content is protected !!