July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಭರದಿಂದ ಆರಂಭಗೊಂಡಿವೆ.
ಏಪ್ರಿಲ್ 21 ರಂದು ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ಹಿನ್ನಲೆಯಲ್ಲಿ ಪ್ರವೇಶಾತಿ ಪ್ರಕ್ರಿಯೆಗಳು ಚುರುಕುಗೊಂಡಿವೆ.
ರಾಷ್ಟ್ರೀಯ ಮೌಲ್ಯಂಕನ ಪರಿಷತ್ತು ನ್ಯಾಕ್ ಸಂಸ್ಥೆಯಿಂದ ಸತತ 4ನೇ ಬಾರಿಗೆ A++ ಮಾನ್ಯತೆಯನ್ನ ಗಳಿಸಿದ ಶ್ರೇಷ್ಠ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಉಜಿರೆ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಸಾಂಸ್ಕೃತಿಕ , ಕ್ರೀಡಾ ಚಟುವಟಿಕೆಗಳು, ತರಬೇತಿ , ಸಂಶೋಧನೆ ಹಾಗೂ ಉದ್ಯೋಗಗಳಿಗೆ ಪೂರಕವಾದ ನಿರಂತರ ತರಬೇತಿಯನ್ನು ನೀಡಲಾಗುತ್ತಿದೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರದಲ್ಲಿಯೇ ವಿಶಿಷ್ಟ ಮಾನ್ಯತೆ ಪಡೆದಿರುವ ಈ ಕಾಲೇಜಿನ ಸೌಲಭ್ಯಗಳನ್ನ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
error: Content is protected !!