25.7 C
ಪುತ್ತೂರು, ಬೆಳ್ತಂಗಡಿ
May 17, 2025
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

ಉಜಿರೆ:1998 ರಲ್ಲಿ ಮರಕ್ಕೆ ಪರ್ಯಾಯವಾಗಿ ಸಿಮೆಂಟಿನಿಂದ ತಯಾರಿಸಲಾದ ಕಟ್ಟಡ ಸಾಮಾಗ್ರಿಗಳನ್ನು ಗ್ರಾಹಕರಿಗೆ ಪರಿಚಯಿಸಿದ ಹೆಮ್ಮೆ ಉಜಿರೆ ಸ್ವ ರಾಜು ಮೇಸ್ತ್ರಿ ಯವರಿಗೆ ಸಲ್ಲುತ್ತದೆ.

ಕಳೆದ 35 ವರ್ಷಗಳ ಹಿಂದೆ ಉಜಿರೆಯಲ್ಲಿ ಲಕ್ಷ್ಮಿ ಇಂಡಸ್ಟ್ರೀಸ್ ಸಂಸ್ಥೆಯನ್ನು ಹುಟ್ಟುಹಾಕಿ ಆ ಮುಖೇನಾ ನೂರಾರು ಮಂದಿಗೆ ಉದ್ಯೋಗ ಕಲ್ಪಿಸಿ ಉದ್ಯಮ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ಮುನ್ನಡೆಯುತ್ತಿರುವ ಗ್ರಾಹಕರ ಅತ್ಯಂತ ಪ್ರೀತಿಯ ಸಂಸ್ಥೆಯಾದ ಲಕ್ಷ್ಮೀ ಇಂಡಸ್ಟ್ರೀಸ್ ಸಂಸ್ಥೆಗೆ 35 ವರ್ಷಗಳು ಎ.22 ರಂದು ಪೂರ್ತಿಯಾಗಿ ಸಂಭ್ರಮಾಚರಣೆಯಲ್ಲಿದೆ.

ಕಳೆದ 35 ವರ್ಷಗಳಿಂದ ಸಂಸ್ಥೆಯು ಗುಣಮಟ್ಟದ ವಸ್ತುಗಳನ್ನು ಪೂರೈಸುವುದರೊಂದಿಗೆ,ಗ್ರಾಹಕರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿ ಸಮಾಜಮುಖಿಯಾಗಿಯೂ ಗುರುತಿಸಿಕೊಂಡಿದೆ.

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ನಲ್ಲಿ 35 ವರ್ಷಗಳ ಹಿಂದೆ ಮರಕ್ಕೆ ಪರ್ಯಾಯವಾಗಿ ಸಿಮೆಂಟಿನಿಂದ ತಯಾರಿಸಿದ ಕಿಟಕಿ, ದಾರಂದಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗೆಡಯವರು ಧರ್ಮಸ್ಥಳದ ವಸತಿ ಗೃಹಗಳಿಗೆ ಉಪಯೋಗಿಸಿ ಸಂಸ್ಥೆಯು ಬಾನೆತ್ತರಕ್ಕೆ ಬೆಳಯಲು ಅವರ ಕೊಡುಗೆ ಅಪಾರವಾದ್ದು ಎಂದು ಮೋಹನ್ ಕುಮಾರ್ ತಿಳಿಸಿದರು.

ಸಂಸ್ಥೆಯಲ್ಲಿ ನೂರಾರು ಮಂದಿಗೆ ಉದ್ಯೋಗ ಕಲ್ಪಿಸಿ, ಅವರ ಬದುಕಿಗೆ ಬೆಳಕಾದವರು ಸ್ವ.ರಾಜು ಮೆಸ್ತ್ರಿಯವರು. ನಂತರದ ದಿನಗಳಲ್ಲಿ ಅತ್ಯಂತ ಯಶಸ್ವಿಯಾಗಿ, ಇನ್ನಷ್ಟು ಗಟ್ಟಿಯಾಗಿ ಸಂಸ್ಥೆಯನ್ನು ಕಟ್ಟಿ ಜಿಲ್ಲೆಯ ಪ್ರಸಿದ್ದ ಉದ್ಯಮ ಸಂಸ್ಥೆಯಲ್ಲಿ ಒಂದಾಗಿ ಮಾಡಿದವರು ಸಮಾಜ ಸೇವೆಯ ಮುಖೇನಾ ಗುರುತಿಸಿಕೊಂಡಿರುವ ಪ್ರಸಿದ್ಧ ಉದ್ಯಮಿ ಮೋಹನ್ ಕುಮಾರ್ ಉಜಿರೆಯವರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya
error: Content is protected !!