22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

ಉಜಿರೆ:1998 ರಲ್ಲಿ ಮರಕ್ಕೆ ಪರ್ಯಾಯವಾಗಿ ಸಿಮೆಂಟಿನಿಂದ ತಯಾರಿಸಲಾದ ಕಟ್ಟಡ ಸಾಮಾಗ್ರಿಗಳನ್ನು ಗ್ರಾಹಕರಿಗೆ ಪರಿಚಯಿಸಿದ ಹೆಮ್ಮೆ ಉಜಿರೆ ಸ್ವ ರಾಜು ಮೇಸ್ತ್ರಿ ಯವರಿಗೆ ಸಲ್ಲುತ್ತದೆ.

ಕಳೆದ 35 ವರ್ಷಗಳ ಹಿಂದೆ ಉಜಿರೆಯಲ್ಲಿ ಲಕ್ಷ್ಮಿ ಇಂಡಸ್ಟ್ರೀಸ್ ಸಂಸ್ಥೆಯನ್ನು ಹುಟ್ಟುಹಾಕಿ ಆ ಮುಖೇನಾ ನೂರಾರು ಮಂದಿಗೆ ಉದ್ಯೋಗ ಕಲ್ಪಿಸಿ ಉದ್ಯಮ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ಮುನ್ನಡೆಯುತ್ತಿರುವ ಗ್ರಾಹಕರ ಅತ್ಯಂತ ಪ್ರೀತಿಯ ಸಂಸ್ಥೆಯಾದ ಲಕ್ಷ್ಮೀ ಇಂಡಸ್ಟ್ರೀಸ್ ಸಂಸ್ಥೆಗೆ 35 ವರ್ಷಗಳು ಎ.22 ರಂದು ಪೂರ್ತಿಯಾಗಿ ಸಂಭ್ರಮಾಚರಣೆಯಲ್ಲಿದೆ.

ಕಳೆದ 35 ವರ್ಷಗಳಿಂದ ಸಂಸ್ಥೆಯು ಗುಣಮಟ್ಟದ ವಸ್ತುಗಳನ್ನು ಪೂರೈಸುವುದರೊಂದಿಗೆ,ಗ್ರಾಹಕರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿ ಸಮಾಜಮುಖಿಯಾಗಿಯೂ ಗುರುತಿಸಿಕೊಂಡಿದೆ.

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ನಲ್ಲಿ 35 ವರ್ಷಗಳ ಹಿಂದೆ ಮರಕ್ಕೆ ಪರ್ಯಾಯವಾಗಿ ಸಿಮೆಂಟಿನಿಂದ ತಯಾರಿಸಿದ ಕಿಟಕಿ, ದಾರಂದಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗೆಡಯವರು ಧರ್ಮಸ್ಥಳದ ವಸತಿ ಗೃಹಗಳಿಗೆ ಉಪಯೋಗಿಸಿ ಸಂಸ್ಥೆಯು ಬಾನೆತ್ತರಕ್ಕೆ ಬೆಳಯಲು ಅವರ ಕೊಡುಗೆ ಅಪಾರವಾದ್ದು ಎಂದು ಮೋಹನ್ ಕುಮಾರ್ ತಿಳಿಸಿದರು.

ಸಂಸ್ಥೆಯಲ್ಲಿ ನೂರಾರು ಮಂದಿಗೆ ಉದ್ಯೋಗ ಕಲ್ಪಿಸಿ, ಅವರ ಬದುಕಿಗೆ ಬೆಳಕಾದವರು ಸ್ವ.ರಾಜು ಮೆಸ್ತ್ರಿಯವರು. ನಂತರದ ದಿನಗಳಲ್ಲಿ ಅತ್ಯಂತ ಯಶಸ್ವಿಯಾಗಿ, ಇನ್ನಷ್ಟು ಗಟ್ಟಿಯಾಗಿ ಸಂಸ್ಥೆಯನ್ನು ಕಟ್ಟಿ ಜಿಲ್ಲೆಯ ಪ್ರಸಿದ್ದ ಉದ್ಯಮ ಸಂಸ್ಥೆಯಲ್ಲಿ ಒಂದಾಗಿ ಮಾಡಿದವರು ಸಮಾಜ ಸೇವೆಯ ಮುಖೇನಾ ಗುರುತಿಸಿಕೊಂಡಿರುವ ಪ್ರಸಿದ್ಧ ಉದ್ಯಮಿ ಮೋಹನ್ ಕುಮಾರ್ ಉಜಿರೆಯವರು.

Related posts

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya
error: Content is protected !!