September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

ಬೆಳ್ತಂಗಡಿ: ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ‌ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು, ಸಹೋದರ ಡಿ‌ ಹರ್ಷೇಂದ್ರ ಕುಮಾರ್ ಅವರನ್ನು, ಶ್ರೀರಾಮ ಕ್ಷೇತ್ರದ ಪೀಠಾಧಿಪತಿಗಳಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು, ಅಸ್ಸಯ್ಯಿದ್ ಕಾಜೂರು ತಂಙಳ್ ಅವರನ್ನು, ಬೇಟಿ ಮಾಡಿದರು.

ಕಾಜೂರು ದರ್ಗಾಶರೀಫ್ ನಲ್ಲಿ ಚಾದರ ಅರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮಸ್ಥಳ ಭೇಟಿಯ ವೇಳೆ ಅಭ್ಯರ್ಥಿ ಕಡೆಯಿಂದ ಪೂಜ್ಯ ಹೆಗ್ಗಡೆಯವರನ್ನು, ಕನ್ಯಾಡಿ ಸ್ವಾಮೀಜಿಯವರನ್ನು ಶಾಲು ಹೊದೆಸಿ ಗೌರವಿಸಲಾಯಿತು. ಶ್ರೀರಾಮ ಕ್ಷೇತ್ರದಲ್ಲಿ ಸ್ವಾಮೀಜಿಯವರು ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರನ್ನು ಸನ್ಮಾನಿಸಿ ಮಾರ್ಗದರ್ಶನ ನೀಡಿದರು.

ಪಕ್ಷದ ಕಾರ್ಯಾಧ್ಯಕ್ಷ ರಾಮ ಆಚಾರಿ, ಸಂ.ಕಾರ್ಯದರ್ಶಿ ಹೆಚ್.ಎನ್ ನಾಗರಾಜ್, ಅಲ್ಪಸಂಖ್ಯಾತ ಘಟಕದ ಪ್ರ. ಕಾರ್ಯದರ್ಶಿ ಶಾಹಿದ್ ಪಾದೆ, ಮಹೇಶ್ ಪಿ.ಜಿ ಉಜಿರೆ ಉಪಸ್ಥಿತರಿದ್ದರು

Related posts

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಜೆಸಿಐ ಮಡಂತ್ಯಾರಿಗೆ ಜೆಸಿಐ ಭಾರತದ ವಲಯ 15 ರ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
error: Content is protected !!