22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

ಬೆಳ್ತಂಗಡಿ: ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ‌ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು, ಸಹೋದರ ಡಿ‌ ಹರ್ಷೇಂದ್ರ ಕುಮಾರ್ ಅವರನ್ನು, ಶ್ರೀರಾಮ ಕ್ಷೇತ್ರದ ಪೀಠಾಧಿಪತಿಗಳಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು, ಅಸ್ಸಯ್ಯಿದ್ ಕಾಜೂರು ತಂಙಳ್ ಅವರನ್ನು, ಬೇಟಿ ಮಾಡಿದರು.

ಕಾಜೂರು ದರ್ಗಾಶರೀಫ್ ನಲ್ಲಿ ಚಾದರ ಅರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮಸ್ಥಳ ಭೇಟಿಯ ವೇಳೆ ಅಭ್ಯರ್ಥಿ ಕಡೆಯಿಂದ ಪೂಜ್ಯ ಹೆಗ್ಗಡೆಯವರನ್ನು, ಕನ್ಯಾಡಿ ಸ್ವಾಮೀಜಿಯವರನ್ನು ಶಾಲು ಹೊದೆಸಿ ಗೌರವಿಸಲಾಯಿತು. ಶ್ರೀರಾಮ ಕ್ಷೇತ್ರದಲ್ಲಿ ಸ್ವಾಮೀಜಿಯವರು ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರನ್ನು ಸನ್ಮಾನಿಸಿ ಮಾರ್ಗದರ್ಶನ ನೀಡಿದರು.

ಪಕ್ಷದ ಕಾರ್ಯಾಧ್ಯಕ್ಷ ರಾಮ ಆಚಾರಿ, ಸಂ.ಕಾರ್ಯದರ್ಶಿ ಹೆಚ್.ಎನ್ ನಾಗರಾಜ್, ಅಲ್ಪಸಂಖ್ಯಾತ ಘಟಕದ ಪ್ರ. ಕಾರ್ಯದರ್ಶಿ ಶಾಹಿದ್ ಪಾದೆ, ಮಹೇಶ್ ಪಿ.ಜಿ ಉಜಿರೆ ಉಪಸ್ಥಿತರಿದ್ದರು

Related posts

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya
error: Content is protected !!