23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ನಿಷೇದಿತ ಮಾದಕ ವಸ್ತು ಗಾಂಜಾ ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವತ೯ನೆ : ನಾಲ್ಕು ಮಂದಿಯ ಬಂಧನ

ವೇಣೂರು: ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ನಾಲ್ಕು ಮಂದಿಯನ್ನು ವೇಣೂರು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಎ.23 ರಂದು ವರದಿಯಾಗಿದೆ.
ಶ್ರೀಶೈಲ ದುಂಡಪ್ಪ ಮುರಗೋಡು ಪೊಲೀಸ್ ಉಪ ನಿರೀಕ್ಷಕರು ವೇಣೂರು ತನ್ನ ಸಿಬ್ಬಂದಿಯವ
ರೊಂದಿಗೆ ರಾತ್ರಿ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ, ಎ. 23 ರಂದು ಬೆಳಗ್ಗಿನ ಜಾವ 5 ಗಂಟೆಗೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ವೇಣೂರು ಕೆಳಗಿನ ಪೇಟೆ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಆರೋಪಿತರುಗಳಾದ ಕೆ.ಆರ್ ಪುರಂ ಬೆಂಗಳೂರು ಗ್ರಾಮಾಂತರದ ವಾರಣಾಸಿ ಗ್ರಾಮದ ನಿವಾಸಿಗಳಾದ ಗೌರಿಶಂಕರ್ ಆರ್(19 ವರ್ಷ), ವಿಶ್ವಾಸ್ ,ಮನು ಪಿ(19 ವರ್ಷ), ಅಭಿ ಕೆ.ಎಲ್( 19 ವರ್ಷ), ಮೋಹನ್ ರಾಜ್ ಎಸ್(18 ವರ್ಷ) ಟಾಟಾ ಕ್ವಾಲಿಸ್‌ ಕಾರನ್ನು ನಿಲ್ಲಿಸಿ ಯಾವುದೋ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರನ್ನು ವಿಚಾರಿಸಲಾಗಿ ಆರೋಪಿತರುಗಳು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವುದಾಗಿ ತಪ್ಪೊಪ್ಪಿಕೊಂಡರೆನ್ನಲಾಗಿದೆ.
ಆರೋಪಿತರನ್ನು ವಶಕ್ಕೆ ಪಡೆದು ಕಾರನ್ನು ಸ್ವಾಧೀನಪಡಿಸಿ, ಆರೋಪಿತರುಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವುದು ದೃಢಪಟ್ಟಿದ್ದು, ಆರೋಪಿತರುಗಳ ವಿರುದ್ಧ ಸ್ವ-ಫಿರ್ಯಾದಿಯನ್ನು ತಯಾರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಬೆಳಾಲು: ಸೊಸೈಟಿ ವಂಚನೆ ಪ್ರಕರಣ ಆರೋಪಿ ಸದಾಶಿವ ಬಂಧನ- ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya
error: Content is protected !!