September 6, 2026
ತಾಲೂಕು ಸುದ್ದಿ

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: 2023ರ ವಿಧಾನ ಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಇಂದು ಎ. 22 ರಂದು ಮನೆ ಭೇಟಿಯ ಮೂಲಕ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ದಿನ ವಿಡೀ ಶಾಸಕರು

ಬಜಿರೆ,ಗುಂಡೂರಿ,ಆರಂಬೋಡಿ,ಹೊಸಂಗಡಿ, ಬಡಕೋಡಿ, ಕಾಶಿಪಟ್ಟ,ಪೆರಾಡಿ,ನಾರಾವಿ, ಕುತ್ತೂರು,ಕೊಕ್ರಾಡಿ,ಸಾವ್ಯ,ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ,ಮೋದಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಅರಿವುಮೂಡಿಸಿ,


ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸುತ್ತಿದ್ದಾರೆ: ಹರೀಶ್ ಪೂಂಜ

ಇಂದು ನಮ್ಮಮನೆಮನೆ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನಾವು ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಕಾರಣ ಕಟ್ಟ ಕಡೆಯ ಕಾರ್ಯಕರ್ತರನ್ನೂ ತಲುಪಲು ನಮ್ಮಿಂದ ಸಾಧ್ಯವಾಗುತ್ತಿದೆ.ಇಂದಿನ ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸಿದ್ದಾರೆ.ನಮ್ಮಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸಮಾಡುತ್ತಿದ್ದು ಕಾರ್ಯಕರ್ತರ ಉತ್ಸಾಹ ನೋಡಿ ತುಂಬಾ ಸಂತೋಷವಾಯಿತು
-ಹರೀಶ್ ಪೂಂಜ

Related posts

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಅಳದಂಗಡಿ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

  ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!