July 23, 2026
ತಾಲೂಕು ಸುದ್ದಿ

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: 2023ರ ವಿಧಾನ ಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಇಂದು ಎ. 22 ರಂದು ಮನೆ ಭೇಟಿಯ ಮೂಲಕ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ದಿನ ವಿಡೀ ಶಾಸಕರು

ಬಜಿರೆ,ಗುಂಡೂರಿ,ಆರಂಬೋಡಿ,ಹೊಸಂಗಡಿ, ಬಡಕೋಡಿ, ಕಾಶಿಪಟ್ಟ,ಪೆರಾಡಿ,ನಾರಾವಿ, ಕುತ್ತೂರು,ಕೊಕ್ರಾಡಿ,ಸಾವ್ಯ,ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ,ಮೋದಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಅರಿವುಮೂಡಿಸಿ,


ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸುತ್ತಿದ್ದಾರೆ: ಹರೀಶ್ ಪೂಂಜ

ಇಂದು ನಮ್ಮಮನೆಮನೆ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನಾವು ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಕಾರಣ ಕಟ್ಟ ಕಡೆಯ ಕಾರ್ಯಕರ್ತರನ್ನೂ ತಲುಪಲು ನಮ್ಮಿಂದ ಸಾಧ್ಯವಾಗುತ್ತಿದೆ.ಇಂದಿನ ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸಿದ್ದಾರೆ.ನಮ್ಮಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸಮಾಡುತ್ತಿದ್ದು ಕಾರ್ಯಕರ್ತರ ಉತ್ಸಾಹ ನೋಡಿ ತುಂಬಾ ಸಂತೋಷವಾಯಿತು
-ಹರೀಶ್ ಪೂಂಜ

Related posts

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya
error: Content is protected !!