ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

ಮರೋಡಿ: ನಮ್ಮ ಮಣ್ಣಿನ ಸನಾತನ ಸಂಸ್ಕ್ರತಿಯು ಅತ್ಯಂತ ಪವಿತ್ರವಾದುದು. ಅದನ್ನು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ದಾಟಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಹೇಳಿದರು.

ಮರೋಡಿ ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ವತಿಯಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಎ.22 ರಂದು ಆಯೋಜಿಸಿದ್ದ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆಯ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.

ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಗೌರವಾಧ್ಯಕ್ಷ ಯಶೋಧರ ಬಂಗೇರ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಸರ ವಿಜಯ ಆರಿಗ, ಶಿರ್ತಾಡಿ ಪ್ರಭಾ ಕ್ಲಿನಿಕ್‌ನ ಡಾ.ಆಶೀರ್ವಾದ್‌, ಪ್ರಗತಿಪರ ಕೃಷಿಕ ರವೀಂದ್ರ ಹೆಗ್ಡೆ ಉಚ್ಚೂರು, ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಅಧ್ಯಕ್ಷ ರಾಘವ ಪೂಜಾರಿ, ಯುವ ಉದ್ಯಮಿ ದಿನೇಶ್‌ ಬುಣ್ಣಾನ್ ಇಸ್ರೇಲ್‌ ಭಾಗವಹಿಸಿದ್ದರು.

ಕಂಬಳ ಕ್ಷೇತ್ರದ ಸಾಧಕ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪ್ರದೀಶ್ ಮರೋಡಿ, ಕರ್ನಾಟಕ ಕೀಡಾರತ್ನ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ಶ್ರೀಧರ ಮರೋಡಿ, ಅಕ್ಷರ ಸಿರಿ ಪ್ರಶಸ್ತಿ ಪುರಸ್ಕೃತ ಬಂದಾರು ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಸುಬ್ರಹ್ಮಣ್ಯ ಪ್ರಸಾದ್ ಅವರ ಪೌರೋಹಿತ್ಯದಲ್ಲಿ ಕಲಶ ಪ್ರತಿಷ್ಠೆ, ಶ್ರೀ ಶನೈಶ್ವರ ಪೂಜೆ, ಉಮಾಮಹೇಶ್ವರ ದೇವರಿಗೆ ರಂಗಪೂಜೆ ನಡೆಯಿತು.

ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಉಮೇಶ್‌ ಮಿಜಾರ್‌ ಸಾರಥ್ಯದ ನಮ್ಮ ಕಲಾವಿದೆರ್‌ ಬೆದ್ರ ಇವರಿಂದ ‘ಕುಸಲ್ದ ಗೊಬ್ಬು’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

ಗಣೇಶ್ ಬಿ. ಕಾರ್ಯಕ್ರಮ ನಿರೂಪಿಸಿದರು. ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.

Related posts

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ನಿಡಿಗಲ್: ನಡ್ವಾಲ್ ಸಿರಿಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!