April 2, 2025
ಅಪರಾಧ ಸುದ್ದಿ

ನಿಷೇದಿತ ಮಾದಕ ವಸ್ತು ಗಾಂಜಾ ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವತ೯ನೆ : ನಾಲ್ಕು ಮಂದಿಯ ಬಂಧನ

ವೇಣೂರು: ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ನಾಲ್ಕು ಮಂದಿಯನ್ನು ವೇಣೂರು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಎ.23 ರಂದು ವರದಿಯಾಗಿದೆ.
ಶ್ರೀಶೈಲ ದುಂಡಪ್ಪ ಮುರಗೋಡು ಪೊಲೀಸ್ ಉಪ ನಿರೀಕ್ಷಕರು ವೇಣೂರು ತನ್ನ ಸಿಬ್ಬಂದಿಯವ
ರೊಂದಿಗೆ ರಾತ್ರಿ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ, ಎ. 23 ರಂದು ಬೆಳಗ್ಗಿನ ಜಾವ 5 ಗಂಟೆಗೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ವೇಣೂರು ಕೆಳಗಿನ ಪೇಟೆ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಆರೋಪಿತರುಗಳಾದ ಕೆ.ಆರ್ ಪುರಂ ಬೆಂಗಳೂರು ಗ್ರಾಮಾಂತರದ ವಾರಣಾಸಿ ಗ್ರಾಮದ ನಿವಾಸಿಗಳಾದ ಗೌರಿಶಂಕರ್ ಆರ್(19 ವರ್ಷ), ವಿಶ್ವಾಸ್ ,ಮನು ಪಿ(19 ವರ್ಷ), ಅಭಿ ಕೆ.ಎಲ್( 19 ವರ್ಷ), ಮೋಹನ್ ರಾಜ್ ಎಸ್(18 ವರ್ಷ) ಟಾಟಾ ಕ್ವಾಲಿಸ್‌ ಕಾರನ್ನು ನಿಲ್ಲಿಸಿ ಯಾವುದೋ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರನ್ನು ವಿಚಾರಿಸಲಾಗಿ ಆರೋಪಿತರುಗಳು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವುದಾಗಿ ತಪ್ಪೊಪ್ಪಿಕೊಂಡರೆನ್ನಲಾಗಿದೆ.
ಆರೋಪಿತರನ್ನು ವಶಕ್ಕೆ ಪಡೆದು ಕಾರನ್ನು ಸ್ವಾಧೀನಪಡಿಸಿ, ಆರೋಪಿತರುಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವುದು ದೃಢಪಟ್ಟಿದ್ದು, ಆರೋಪಿತರುಗಳ ವಿರುದ್ಧ ಸ್ವ-ಫಿರ್ಯಾದಿಯನ್ನು ತಯಾರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

Suddi Udaya
error: Content is protected !!