July 23, 2026
ತಾಲೂಕು ಸುದ್ದಿ

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: 2023ರ ವಿಧಾನ ಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಇಂದು ಎ. 22 ರಂದು ಮನೆ ಭೇಟಿಯ ಮೂಲಕ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ದಿನ ವಿಡೀ ಶಾಸಕರು

ಬಜಿರೆ,ಗುಂಡೂರಿ,ಆರಂಬೋಡಿ,ಹೊಸಂಗಡಿ, ಬಡಕೋಡಿ, ಕಾಶಿಪಟ್ಟ,ಪೆರಾಡಿ,ನಾರಾವಿ, ಕುತ್ತೂರು,ಕೊಕ್ರಾಡಿ,ಸಾವ್ಯ,ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ,ಮೋದಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಅರಿವುಮೂಡಿಸಿ,


ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸುತ್ತಿದ್ದಾರೆ: ಹರೀಶ್ ಪೂಂಜ

ಇಂದು ನಮ್ಮಮನೆಮನೆ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನಾವು ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಕಾರಣ ಕಟ್ಟ ಕಡೆಯ ಕಾರ್ಯಕರ್ತರನ್ನೂ ತಲುಪಲು ನಮ್ಮಿಂದ ಸಾಧ್ಯವಾಗುತ್ತಿದೆ.ಇಂದಿನ ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸಿದ್ದಾರೆ.ನಮ್ಮಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸಮಾಡುತ್ತಿದ್ದು ಕಾರ್ಯಕರ್ತರ ಉತ್ಸಾಹ ನೋಡಿ ತುಂಬಾ ಸಂತೋಷವಾಯಿತು
-ಹರೀಶ್ ಪೂಂಜ

Related posts

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya
error: Content is protected !!