September 6, 2026
ತಾಲೂಕು ಸುದ್ದಿ

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: 2023ರ ವಿಧಾನ ಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಇಂದು ಎ. 22 ರಂದು ಮನೆ ಭೇಟಿಯ ಮೂಲಕ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ದಿನ ವಿಡೀ ಶಾಸಕರು

ಬಜಿರೆ,ಗುಂಡೂರಿ,ಆರಂಬೋಡಿ,ಹೊಸಂಗಡಿ, ಬಡಕೋಡಿ, ಕಾಶಿಪಟ್ಟ,ಪೆರಾಡಿ,ನಾರಾವಿ, ಕುತ್ತೂರು,ಕೊಕ್ರಾಡಿ,ಸಾವ್ಯ,ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ,ಮೋದಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಅರಿವುಮೂಡಿಸಿ,


ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸುತ್ತಿದ್ದಾರೆ: ಹರೀಶ್ ಪೂಂಜ

ಇಂದು ನಮ್ಮಮನೆಮನೆ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನಾವು ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಕಾರಣ ಕಟ್ಟ ಕಡೆಯ ಕಾರ್ಯಕರ್ತರನ್ನೂ ತಲುಪಲು ನಮ್ಮಿಂದ ಸಾಧ್ಯವಾಗುತ್ತಿದೆ.ಇಂದಿನ ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸಿದ್ದಾರೆ.ನಮ್ಮಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸಮಾಡುತ್ತಿದ್ದು ಕಾರ್ಯಕರ್ತರ ಉತ್ಸಾಹ ನೋಡಿ ತುಂಬಾ ಸಂತೋಷವಾಯಿತು
-ಹರೀಶ್ ಪೂಂಜ

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!