22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 39 ನೇ ವರ್ಷದ ಸಂಭ್ರಮದಲ್ಲಿ 15 ನೇ ವರ್ಷದ ಸಾಮೂಹಿಕ ವಿವಾಹದ ನಿಶ್ಚಿತಾರ್ಥ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು.ಸಾಮೂಹಿಕ ನಿಶ್ಚಿತಾರ್ಥದಲ್ಲಿ 11 ಜೋಡಿಗಳಿಗಳಿದ್ದು ಎ.30ರಂದು ನವವಧುವರರು ಹಸೆಮಣೆಯನ್ನೇರಿ ಗೃಹಸ್ಥಾಶ್ರಮದ ದೀಕ್ಷೆಯನ್ನು ಪಡೆಯಲಿದ್ದಾರೆ.ಸಾಮೂಹಿಕ ವಿವಾಹದ ನಿಶ್ಚಿತಾರ್ಥ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಕೋಶಾಧಿಕಾರಿ ವಸಂತ ಸುವರ್ಣ ನೇರವೇರಿಸಿ ಶುಭಕೋರಿದರು.

ಮೂರ್ಜೆ ಉದ್ಯಮಿ ನಾಗೇಶ್ ಪ್ರಭು ವಧೂವರರ ಧಾರಾ ವಸ್ತ್ರ ವಿತರಣೆಯನ್ನು ಮಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ.ಧ.ಗ್ರಾ.ಯೋಜನೆಯ ಪುಂಜಾಲಕಟ್ಟೆ ವಲಯ ಮೇಲ್ವಿಚಾರಕಿ ಅಶ್ವಿನಿ ವಹಿಸಿದ್ದರು.ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಳಾಗಿ ಉದ್ಯಮಿ ಚಂದ್ರಹಾಸ ಶೆಟ್ಟಿ, ಬಸವನ ಗುಡಿ ಗಣೇಶ್ ವುಡ್ ಇಂಡಸ್ಟ್ರೀಸ್ ನ ಗಣೇಶ್ ಮೂಲ್ಯ ಅನಿಲಡೆ,ಕುಕ್ಕಳ ಘಟಕದ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಚಿದಾನಂದ ಕುಲಾಲ್,ಪುಂಜಾಲಕಟ್ಟೆ ಮುರುಘೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕುರ್ಡುಮೆ, ಸಿದ್ದಕಟ್ಟೆ ಗುತ್ತಿಗೆದಾರ ದೀಪಕ್ ಶೆಟ್ಟಿಗಾರ್, ಕುತ್ತಿಲ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೀರೀಶ್ ಸಾಲಿಯಾನ್ ಹೆಗ್ಗಡೆಬೆಟ್ಟುಗುತ್ತು,ಶ್ರೀ ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಅತ್ತಾಜೆ, ಪೂಜಾರಿ, ಗ್ರಾ.ಪಂ ಸದಸ್ಯ ಕಾಂತಪ್ಪ ಸತ್ಯಸಾರಮಾನಿ ದೈವಸ್ಥಾನದ ಆಡಳಿತ ಮೊಕ್ತೇಸರ ಹರಿಯಪ್ಪ ಪುತ್ತೂರು,ವಾಮದಪದವು ಸಹಕಾರಿ ದುರೀಣ ಯಶೋಧರ ಶೆಟ್ಟಿ, ಕ್ಲಬ್ ನ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ,ಗೌರಾವಾಧ್ಯಕ್ಷ ಅಬ್ದುಲ್ಲಾ ಪಿ,ಕಾರ್ಯದರ್ಶಿ ಜಯರಾಜ್ ಅತ್ತಾಜೆ,ಸಂಚಾಲಕ ರಾಜೇಶ್ ಪಿ.ಪುಂಜಾಲಕಟ್ಟೆ ಉಪಸ್ಥಿತರಿದ್ದರು.

ಅಮೃತಾ ಪ್ರಾರ್ಥಿಸಿದರು.ಪ್ರಭಾಕರ್ ಪಿ.ಎಮ್ ಸ್ವಾಗತಿಸಿದರು,ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ತುಂಗಪ್ಪ ಬಂಗೇರ ಪ್ರಾಸ್ತವಿಕ ಮಾತನಾಡಿದರು.ಕ್ಲಬ್ ನ ಪದಾಧಿಕಾರಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya
error: Content is protected !!