July 23, 2026
ಅಪರಾಧ ಸುದ್ದಿ

ನಿಷೇದಿತ ಮಾದಕ ವಸ್ತು ಗಾಂಜಾ ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವತ೯ನೆ : ನಾಲ್ಕು ಮಂದಿಯ ಬಂಧನ

ವೇಣೂರು: ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ನಾಲ್ಕು ಮಂದಿಯನ್ನು ವೇಣೂರು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಎ.23 ರಂದು ವರದಿಯಾಗಿದೆ.
ಶ್ರೀಶೈಲ ದುಂಡಪ್ಪ ಮುರಗೋಡು ಪೊಲೀಸ್ ಉಪ ನಿರೀಕ್ಷಕರು ವೇಣೂರು ತನ್ನ ಸಿಬ್ಬಂದಿಯವ
ರೊಂದಿಗೆ ರಾತ್ರಿ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ, ಎ. 23 ರಂದು ಬೆಳಗ್ಗಿನ ಜಾವ 5 ಗಂಟೆಗೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ವೇಣೂರು ಕೆಳಗಿನ ಪೇಟೆ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಆರೋಪಿತರುಗಳಾದ ಕೆ.ಆರ್ ಪುರಂ ಬೆಂಗಳೂರು ಗ್ರಾಮಾಂತರದ ವಾರಣಾಸಿ ಗ್ರಾಮದ ನಿವಾಸಿಗಳಾದ ಗೌರಿಶಂಕರ್ ಆರ್(19 ವರ್ಷ), ವಿಶ್ವಾಸ್ ,ಮನು ಪಿ(19 ವರ್ಷ), ಅಭಿ ಕೆ.ಎಲ್( 19 ವರ್ಷ), ಮೋಹನ್ ರಾಜ್ ಎಸ್(18 ವರ್ಷ) ಟಾಟಾ ಕ್ವಾಲಿಸ್‌ ಕಾರನ್ನು ನಿಲ್ಲಿಸಿ ಯಾವುದೋ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರನ್ನು ವಿಚಾರಿಸಲಾಗಿ ಆರೋಪಿತರುಗಳು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವುದಾಗಿ ತಪ್ಪೊಪ್ಪಿಕೊಂಡರೆನ್ನಲಾಗಿದೆ.
ಆರೋಪಿತರನ್ನು ವಶಕ್ಕೆ ಪಡೆದು ಕಾರನ್ನು ಸ್ವಾಧೀನಪಡಿಸಿ, ಆರೋಪಿತರುಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವುದು ದೃಢಪಟ್ಟಿದ್ದು, ಆರೋಪಿತರುಗಳ ವಿರುದ್ಧ ಸ್ವ-ಫಿರ್ಯಾದಿಯನ್ನು ತಯಾರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya
error: Content is protected !!