23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ನಿಷೇದಿತ ಮಾದಕ ವಸ್ತು ಗಾಂಜಾ ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವತ೯ನೆ : ನಾಲ್ಕು ಮಂದಿಯ ಬಂಧನ

ವೇಣೂರು: ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ನಾಲ್ಕು ಮಂದಿಯನ್ನು ವೇಣೂರು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಎ.23 ರಂದು ವರದಿಯಾಗಿದೆ.
ಶ್ರೀಶೈಲ ದುಂಡಪ್ಪ ಮುರಗೋಡು ಪೊಲೀಸ್ ಉಪ ನಿರೀಕ್ಷಕರು ವೇಣೂರು ತನ್ನ ಸಿಬ್ಬಂದಿಯವ
ರೊಂದಿಗೆ ರಾತ್ರಿ ರೌಂಡ್ಸ್‌ ಕರ್ತವ್ಯದಲ್ಲಿರುತ್ತಾ, ಎ. 23 ರಂದು ಬೆಳಗ್ಗಿನ ಜಾವ 5 ಗಂಟೆಗೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ವೇಣೂರು ಕೆಳಗಿನ ಪೇಟೆ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಆರೋಪಿತರುಗಳಾದ ಕೆ.ಆರ್ ಪುರಂ ಬೆಂಗಳೂರು ಗ್ರಾಮಾಂತರದ ವಾರಣಾಸಿ ಗ್ರಾಮದ ನಿವಾಸಿಗಳಾದ ಗೌರಿಶಂಕರ್ ಆರ್(19 ವರ್ಷ), ವಿಶ್ವಾಸ್ ,ಮನು ಪಿ(19 ವರ್ಷ), ಅಭಿ ಕೆ.ಎಲ್( 19 ವರ್ಷ), ಮೋಹನ್ ರಾಜ್ ಎಸ್(18 ವರ್ಷ) ಟಾಟಾ ಕ್ವಾಲಿಸ್‌ ಕಾರನ್ನು ನಿಲ್ಲಿಸಿ ಯಾವುದೋ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರನ್ನು ವಿಚಾರಿಸಲಾಗಿ ಆರೋಪಿತರುಗಳು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವುದಾಗಿ ತಪ್ಪೊಪ್ಪಿಕೊಂಡರೆನ್ನಲಾಗಿದೆ.
ಆರೋಪಿತರನ್ನು ವಶಕ್ಕೆ ಪಡೆದು ಕಾರನ್ನು ಸ್ವಾಧೀನಪಡಿಸಿ, ಆರೋಪಿತರುಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವುದು ದೃಢಪಟ್ಟಿದ್ದು, ಆರೋಪಿತರುಗಳ ವಿರುದ್ಧ ಸ್ವ-ಫಿರ್ಯಾದಿಯನ್ನು ತಯಾರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya
error: Content is protected !!