ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್‌ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿ.ಎಮ್ ಅವರು ಎ.24 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಪಿ.ಸಿ. ಸೆಬಾಸ್ಟಿನ್, ಪ್ರಮುಖರಾದ ಅಜೇಯ್ ಮಟ್ಟಿ, ಜೈಸನ್ ಕಳೆಂಜ , ಸಾಬು ಕಕ್ಕಿಂಜೆ ಉಪಸ್ಥಿತರಿದ್ದರು.

Leave a Comment

error: Content is protected !!