July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಬೆಳ್ತಂಗಡಿ ಘಟಕವೂ ಹಲವಾರು ಬಡ ಕುಟುಂಬಕ್ಕೆ ಸಹಕಾರವನ್ನು ನೀಡುತ್ತಾ ಬ್ರಹ್ಮ ಶ್ರೀ ಸೇವಾ ನಿಧಿಯಿಂದ 47ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪರೋಡಿತ್ತಾಯಕಟ್ಟೆ ಬಳಿಯ ಮಾನ್ಯ ಳ ಮನೆಗ ಬೇಟಿ ನೀಡಿ ನೀಡಲಾಯಿತು.

ಮಾನ್ಯಳು ಸುಮಾರು 6 ವರ್ಷ ಪ್ರಾಯದವಳಾಗಿದ್ದು ,ಅಂಗವೈಕಲ್ಯಕ್ಕೆ ತುತ್ತಾಗಿದ್ದು, ಮಾನ್ಯಳ ಕುಟುಂಬದಲ್ಲಿ ತಂದೆ ಕೆಲಸಕ್ಕೆ ಹೋಗುತ್ತಿದ್ದು,ತಾಯಿ ಮಾನ್ಯಳ ಆರೈಕೆಯಲ್ಲಿ ತೊಡಗಿರುತ್ತಾರೆ.ಮಾನ್ಯಳ ಮುಂದಿನ ಆರೋಗ್ಯಕ್ಕೆ ವೆಚ್ಚ ಭರಿಸಲು ಸಾಧ್ಯವಾಗದೇ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಮನವಿ ನೀಡಿರುತ್ತಾರೆ ಈ ಕೂಡಲೇ ಮಾನ್ಯಳ ಮನೆಯ ಸಮಸ್ಯೆಯನ್ನು ಅರಿತ ಬಿರುವೆರ್ ಕುಡ್ಲ ಘಟಕವೂ ಎಲ್ಲಾ ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ರೂ.15 ಸಾವಿರ ಸಹಾಯಧನ ಚೆಕ್ಕ್ ನ್ನು ಸುವರ್ಣ ಪ್ರತಿಷ್ಠಾನ ಮುಖ್ಯಸ್ಥರಾದ ಸಂಪತ್.ಬಿ ಸುವರ್ಣ ಇವರು ನೀಡಿದರು .ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಉಜಿರೆ ,ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಮದ್ದಡ್ಕ,ಶ್ರೀ ಕೊಯ್ಯೂರು ಹಾಗೂ ಪವನ್ ಕಟ್ಟೆ ಉಪಸ್ಥಿತರಿದ್ದರು

Related posts

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!