September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಬೆಳ್ತಂಗಡಿ ಘಟಕವೂ ಹಲವಾರು ಬಡ ಕುಟುಂಬಕ್ಕೆ ಸಹಕಾರವನ್ನು ನೀಡುತ್ತಾ ಬ್ರಹ್ಮ ಶ್ರೀ ಸೇವಾ ನಿಧಿಯಿಂದ 47ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪರೋಡಿತ್ತಾಯಕಟ್ಟೆ ಬಳಿಯ ಮಾನ್ಯ ಳ ಮನೆಗ ಬೇಟಿ ನೀಡಿ ನೀಡಲಾಯಿತು.

ಮಾನ್ಯಳು ಸುಮಾರು 6 ವರ್ಷ ಪ್ರಾಯದವಳಾಗಿದ್ದು ,ಅಂಗವೈಕಲ್ಯಕ್ಕೆ ತುತ್ತಾಗಿದ್ದು, ಮಾನ್ಯಳ ಕುಟುಂಬದಲ್ಲಿ ತಂದೆ ಕೆಲಸಕ್ಕೆ ಹೋಗುತ್ತಿದ್ದು,ತಾಯಿ ಮಾನ್ಯಳ ಆರೈಕೆಯಲ್ಲಿ ತೊಡಗಿರುತ್ತಾರೆ.ಮಾನ್ಯಳ ಮುಂದಿನ ಆರೋಗ್ಯಕ್ಕೆ ವೆಚ್ಚ ಭರಿಸಲು ಸಾಧ್ಯವಾಗದೇ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಮನವಿ ನೀಡಿರುತ್ತಾರೆ ಈ ಕೂಡಲೇ ಮಾನ್ಯಳ ಮನೆಯ ಸಮಸ್ಯೆಯನ್ನು ಅರಿತ ಬಿರುವೆರ್ ಕುಡ್ಲ ಘಟಕವೂ ಎಲ್ಲಾ ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ರೂ.15 ಸಾವಿರ ಸಹಾಯಧನ ಚೆಕ್ಕ್ ನ್ನು ಸುವರ್ಣ ಪ್ರತಿಷ್ಠಾನ ಮುಖ್ಯಸ್ಥರಾದ ಸಂಪತ್.ಬಿ ಸುವರ್ಣ ಇವರು ನೀಡಿದರು .ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಉಜಿರೆ ,ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಮದ್ದಡ್ಕ,ಶ್ರೀ ಕೊಯ್ಯೂರು ಹಾಗೂ ಪವನ್ ಕಟ್ಟೆ ಉಪಸ್ಥಿತರಿದ್ದರು

Related posts

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಮೇಲಂತಬೆಟ್ಟು ಕುಸುಮಾವತಿ ನಿಧನ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!