30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ


ಪತ್ರಿಕಾಗೋಷ್ಠಿ
ಬೆಳ್ತಂಗಡಿ : ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪರ್ಧಿಸುವ ಶಿಗ್ಗಾವಿ ಕ್ಷೇತ್ರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ವರುಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುದ್ದಿ ಆಂದೋಲನವನ್ನು ಹೆಚ್ಚು ಬಲಗೊಳಿಸುವ ಉದ್ದೇಶ ಹೊಂದಿದ್ದೇನೆ ಎಂದು ಸುದ್ದಿ ಜನಾಂದೋಲನ ವೇದಿಕೆಯ ಅಧ್ಯಕ್ಷ ಡಾ. ಯು.ಪಿ ಶಿವಾನಂದ ಹೇಳಿದರು.
ಅವರು ಎ.24ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುದ್ದಿ ಜನಾಂದೋಲನ ವೇದಿಕೆ ಮೂಲಕ ಲಂಚ, ಭ್ರಷ್ಟಾಚಾರವನ್ನು ಬಹಿಷ್ಕರಿಸಿ, ಅದರಿಂದ ತೊಂದರೆಯಾಗುವ ಜನರಿಗೆ ಪರಿಹಾರವನ್ನು, ಹಣವನ್ನು ತೆಗೆಸಿಕೊಡುವ ಪ್ರತಿಜ್ಞೆ ಮಾಡುವಂತೆ ಆಯಾಯ ಕ್ಷೇತ್ರದ ಅಭ್ಯರ್ಥಿಗಳಿಗೆ ಮತದಾರರ ಮೂಲಕ ಪ್ರಯತ್ನ ನಡೆಸಲಿದ್ದೇವೆ. ರಾಜ್ಯದ 224 ಕ್ಷೇತ್ರಗಳಲ್ಲಿ ಚುನಾವಣೆ ಇರುವುದರಿಂದ ಈ ಅವಕಾಶವನ್ನು ಉಪಯೋಗಿಸಿಕೊಂಡು ಈ ವಿಚಾರವನ್ನು ಮತದಾರರ ಮೂಲಕ ಅಭ್ಯರ್ಥಿಗಳ ಗಮನಕ್ಕೆ ತರಲಿದ್ದೇವೆ” ಎಂದು ಹೇಳಿದರು.
ನಾವು ಮತ ನೀಡಿ ಆರಿಸುವ ಅಭ್ಯರ್ಥಿ ಲಂಚ ಭ್ರಷ್ಟಾಚಾರವನ್ನು ನಿಲ್ಲಿಸುವವನೇ ಆಗಬೇಕು. ಪ್ರತಿಯೊಬ್ಬ ಮತದಾರ ತಾನು ಈ ಸಲ ಮತದಾನ ಮಾಡುವಾಗ ಇದನ್ನು ಅಭ್ಯರ್ಥಿಗಳ ಗಮನಕ್ಕೆ ತರುವಂತಹ ಕೆಲಸ ನಡೆಯಬೇಕು. ಇದಕ್ಕಾಗಿ ಫಲಕಗಳನ್ನು ಮನೆ, ಮನೆಗಳಲ್ಲಿ, ದಾರಿಗಳಲ್ಲಿ ಅಳವಡಿಸಬೇಕು. ಸುದ್ದಿ ಜನಾಂದೋಲನ ವೇದಿಕೆಯಿಂದ ಫಲಕಗಳನ್ನು ರೂ.೧೫ ಪಾವತಿಸಿ ಪಡೆದುಕೊಳ್ಳಬಹುದು ಎಂದರು ಹೇಳಿ, ಹಳ್ಳಿಯಿಂದ ಡೆಲ್ಲಿಗೆ ಆಡಳಿತವಾಗಬೇಕು ಡೆಲ್ಲಿಯಿಂದ ಹಳ್ಳಿಗೆ ಅಲ್ಲ” ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸುದ್ದಿ ಪತ್ರಿಕೆಯ ಸಂಪಾದಕ ಸಂತೋಷ್ ಶಾಂತಿನಗರ, ಮುಖ್ಯ ವರದಿಗಾರ ಜಾರಪ್ಪ ಪೂಜಾರಿ, ಮನೀಶ್ ಅಂಚನ್ ಹಾಗೂ ಕೆ.ಎನ್. ಗೌಡ ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya
error: Content is protected !!