22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಬೆಳ್ತಂಗಡಿ ಘಟಕವೂ ಹಲವಾರು ಬಡ ಕುಟುಂಬಕ್ಕೆ ಸಹಕಾರವನ್ನು ನೀಡುತ್ತಾ ಬ್ರಹ್ಮ ಶ್ರೀ ಸೇವಾ ನಿಧಿಯಿಂದ 47ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪರೋಡಿತ್ತಾಯಕಟ್ಟೆ ಬಳಿಯ ಮಾನ್ಯ ಳ ಮನೆಗ ಬೇಟಿ ನೀಡಿ ನೀಡಲಾಯಿತು.

ಮಾನ್ಯಳು ಸುಮಾರು 6 ವರ್ಷ ಪ್ರಾಯದವಳಾಗಿದ್ದು ,ಅಂಗವೈಕಲ್ಯಕ್ಕೆ ತುತ್ತಾಗಿದ್ದು, ಮಾನ್ಯಳ ಕುಟುಂಬದಲ್ಲಿ ತಂದೆ ಕೆಲಸಕ್ಕೆ ಹೋಗುತ್ತಿದ್ದು,ತಾಯಿ ಮಾನ್ಯಳ ಆರೈಕೆಯಲ್ಲಿ ತೊಡಗಿರುತ್ತಾರೆ.ಮಾನ್ಯಳ ಮುಂದಿನ ಆರೋಗ್ಯಕ್ಕೆ ವೆಚ್ಚ ಭರಿಸಲು ಸಾಧ್ಯವಾಗದೇ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಮನವಿ ನೀಡಿರುತ್ತಾರೆ ಈ ಕೂಡಲೇ ಮಾನ್ಯಳ ಮನೆಯ ಸಮಸ್ಯೆಯನ್ನು ಅರಿತ ಬಿರುವೆರ್ ಕುಡ್ಲ ಘಟಕವೂ ಎಲ್ಲಾ ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ರೂ.15 ಸಾವಿರ ಸಹಾಯಧನ ಚೆಕ್ಕ್ ನ್ನು ಸುವರ್ಣ ಪ್ರತಿಷ್ಠಾನ ಮುಖ್ಯಸ್ಥರಾದ ಸಂಪತ್.ಬಿ ಸುವರ್ಣ ಇವರು ನೀಡಿದರು .ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಉಜಿರೆ ,ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಮದ್ದಡ್ಕ,ಶ್ರೀ ಕೊಯ್ಯೂರು ಹಾಗೂ ಪವನ್ ಕಟ್ಟೆ ಉಪಸ್ಥಿತರಿದ್ದರು

Related posts

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
error: Content is protected !!