37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

ಸಾವ್ಯ: ಶುಭೋದಯ ಯುವಕ ಮಂಡಲ ಇದರ ವತಿಯಿಂದ ನಡೆದ 12ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಪೂಜೆಯು ಎ.22 ರಂದು ಕೆಳ ಕಾಶಿಪಟ್ಣ ಅನಂತ ಅಶ್ರಣ್ಣ ರ ನೇತೃತ್ವದಲ್ಲಿ ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಆಶೀರ್ವಚನ ನೀಡಿದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಧರ್ಮದ ಉಳಿವಿಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಹೇಳಿದರು.

ನಂತರ ಧಾರ್ಮಿಕ ಪ್ರವಚನ ಮಾಡಿದ ಅಕ್ಷಯ ಗೋಖಲೆ ಅವರು ಮಾತನಾಡಿ ಸಂಘಟನೆಯ ಅಗತ್ಯತೆ, ಧರ್ಮದ ಉಳಿವಿಗಾಗಿ ಮಹಿಳೆಯರು ಮಾಡಬೇಕಾದ ಕರ್ತವ್ಯದ ಬಗ್ಗೆ ಹೇಳಿ ಭಾರತ ದೇಶದ ನೆಲ ಜಲ ಸಂಸ್ಕೃತಿ ಯ ಬಗ್ಗೆ ಹೇಳಿದರು.

ಸಭಾ ವೇದಿಕೆಯ ಅಧ್ಯಕ್ಷ ತೆಯನ್ನು ಯುವಕ ಮಂಡಲ ದ ಅಧ್ಯಕ್ಷರಾದ ರಕ್ಷಿತ್ ಆರ್ ಗುರುರಕ್ಷ ವಹಿಸಿದ್ದರು.
ವೇದಿಕೆಯಲ್ಲಿ ಯುವಕ ಮಂಡಲ ಗೌರವ ಅಧ್ಯಕ್ಷ ಶ್ರೀಧರ ಭೂತಡ್ಕ, ಕ್ಷೇಮ ಕ್ಲಿನಿಕ್ ನ ಶ್ರೀ ವಿಷ್ಣು ಕುಮಾರ್ ಹೆಗ್ಡೆ
ಸರಕಾರಿ ವಕೀಲರಾದ ಸತೀಶ್ ಕೆ, ಉಪಸ್ಥಿತರಿದ್ದರು.

ವಿನೀತ್ ಕೋಟ್ಯಾನ್ ಸ್ವಾಗತಿಸಿ, ಹರೀಶ್ ಹೆಗ್ಡೆ ವಂದಿಸಿದರು.
ಚೈತನ್ಯ ಕಲಾವಿದರು ಬೈಲೂರು ಇವರಿಂದ ವಾರ್ಡ್ ನಂಬರ್ 2 ನಾಟಕ ನಡೆಯಿತು.

Related posts

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya
error: Content is protected !!