23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಬೆಳ್ತಂಗಡಿ ಘಟಕವೂ ಹಲವಾರು ಬಡ ಕುಟುಂಬಕ್ಕೆ ಸಹಕಾರವನ್ನು ನೀಡುತ್ತಾ ಬ್ರಹ್ಮ ಶ್ರೀ ಸೇವಾ ನಿಧಿಯಿಂದ 47ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪರೋಡಿತ್ತಾಯಕಟ್ಟೆ ಬಳಿಯ ಮಾನ್ಯ ಳ ಮನೆಗ ಬೇಟಿ ನೀಡಿ ನೀಡಲಾಯಿತು.

ಮಾನ್ಯಳು ಸುಮಾರು 6 ವರ್ಷ ಪ್ರಾಯದವಳಾಗಿದ್ದು ,ಅಂಗವೈಕಲ್ಯಕ್ಕೆ ತುತ್ತಾಗಿದ್ದು, ಮಾನ್ಯಳ ಕುಟುಂಬದಲ್ಲಿ ತಂದೆ ಕೆಲಸಕ್ಕೆ ಹೋಗುತ್ತಿದ್ದು,ತಾಯಿ ಮಾನ್ಯಳ ಆರೈಕೆಯಲ್ಲಿ ತೊಡಗಿರುತ್ತಾರೆ.ಮಾನ್ಯಳ ಮುಂದಿನ ಆರೋಗ್ಯಕ್ಕೆ ವೆಚ್ಚ ಭರಿಸಲು ಸಾಧ್ಯವಾಗದೇ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಮನವಿ ನೀಡಿರುತ್ತಾರೆ ಈ ಕೂಡಲೇ ಮಾನ್ಯಳ ಮನೆಯ ಸಮಸ್ಯೆಯನ್ನು ಅರಿತ ಬಿರುವೆರ್ ಕುಡ್ಲ ಘಟಕವೂ ಎಲ್ಲಾ ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ರೂ.15 ಸಾವಿರ ಸಹಾಯಧನ ಚೆಕ್ಕ್ ನ್ನು ಸುವರ್ಣ ಪ್ರತಿಷ್ಠಾನ ಮುಖ್ಯಸ್ಥರಾದ ಸಂಪತ್.ಬಿ ಸುವರ್ಣ ಇವರು ನೀಡಿದರು .ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಉಜಿರೆ ,ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಮದ್ದಡ್ಕ,ಶ್ರೀ ಕೊಯ್ಯೂರು ಹಾಗೂ ಪವನ್ ಕಟ್ಟೆ ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya
error: Content is protected !!